ಆ್ಯಪ್ನಗರ

ಕುಡಿವ ನೀರಿಗೆ ಸಮಸ್ಯೆಯಾದಂತೆ ಕ್ರಮ ವಹಿಸಿ

ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯ ಸೂಚನೆ ನೀಡಿದರು.

Vijaya Karnataka 31 Mar 2019, 5:00 am
ಚಾಮರಾಜನಗರ : ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯ ಸೂಚನೆ ನೀಡಿದರು.
Vijaya Karnataka Web CHN-CHN30P4


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು, ಕೃಷಿ, ಪಶುಪಾಲನೆ ಸೇರಿದಂತೆ ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯು ಹೆಚ್ಚು ಒಣ ಪ್ರದೇಶದಿಂದ ಕೂಡಿದೆ. ಈಗಾಗಲೇ ಬೇಸಿಗೆಯು ಪ್ರಾರಂಭವಾಗಿರುವುದರಿಂದ ಕುಡಿಯುವ ನೀರು ಮತ್ತು ಮೇವು ಬಹಳ ಅವಶ್ಯಕವಾಗಿದೆ. ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ರೈತರ ಕೃಷಿ ಕಾರ್ಯಕ್ಕೆ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ ಪೂರಕ ವ್ಯವಸ್ಥೆ ಕಲ್ಪಿಸಬೇಕು. ರಸಗೊಬ್ಬರ ಇತರೆ ಅಗತ್ಯ ನೆರವನ್ನು ನೀಡಬೇಕು. ಯಾವುದೇ ದೂರುಗಳಿಗೆ ಅವಕಾಶವಾಗಬಾರದು. ತಾಲೂಕು ಮಟ್ಟದಲ್ಲಿಯು ಸಭೆ ನಡೆಸಿ ಕುಡಿಯುವ ನೀರು, ಮೇವು ಸಮರ್ಪಕ ಪೂರೈಕೆಗೆ ಅಧಿಕಾರಿಗಳು ಮುಂದಾಗುವಂತೆ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.

ನರೇಗಾ ಯೋಜನೆಯಡಿ ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಲ್ಲಿ ಹೆಚ್ಚಾಗಿ ಜನತೆಗೆ ಕೆಲಸ ಮಾಡುವಂತೆ ಅವಕಾಶÜ ರೂಪಿಸಬೇಕೆಂದು ತಿಳಿಸಿದರು.

ಶುದ್ಧ ಕುಡಿವ ನೀರು: ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಮಾತನಾಡಿ, ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಜನತೆಗೆ ಯಾವುದೇ ತೊಂದರೆಯಾಗದಂತೆ ಒದಗಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಅವರು ಮಾತನಾಡಿದರು.

ನಾನಾ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ