ಆ್ಯಪ್ನಗರ

ಕುದೇರು ಹಾಲು ಉತ್ಪಾದಕರ ಸಂಘಕ್ಕೆ ವರಿಷ್ಠರ ಆಯ್ಕೆ

ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಕೆ.ಎಂ.ಸಿದ್ದೇಶ್‌ ಹಾಗೂ ಉಪಾಧ್ಯಕ್ಷರಾಗಿ ಎಸ್‌.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Vijaya Karnataka 17 Dec 2018, 5:00 am
ಸಂತೇಮರಹಳ್ಳಿ : ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಕೆ.ಎಂ.ಸಿದ್ದೇಶ್‌ ಹಾಗೂ ಉಪಾಧ್ಯಕ್ಷರಾಗಿ ಎಸ್‌.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Vijaya Karnataka Web the choice of the senior milk producers union
ಕುದೇರು ಹಾಲು ಉತ್ಪಾದಕರ ಸಂಘಕ್ಕೆ ವರಿಷ್ಠರ ಆಯ್ಕೆ


ಈ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷ ಕೆ.ಎಂ.ಸಿದ್ದೇಶ್‌ ಮಾತನಾಡಿ, ಡೇರಿಗೆ ಸರಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸಂಘಕ್ಕೆ ದೊರಕಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆ. ಉತ್ಪಾದಕರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನೂತನ ನಿರ್ದೇಶಕರಾಗಿ ಕೆ.ಎಂ.ಶ್ರೀಕಂಠಸ್ವಾಮಿ, ಮಹದೇವಪ್ಪ, ಮಾದೇಗೌಡ, ಬಂಗಾರಗಿರಿ, ಜಯಮ್ಮ, ರಾಜಮ್ಮ, ಕಿರಣ್‌, ಎಸ್‌.ನಟರಾಜು ಆಯ್ಕೆಯಾದರು.

ಮಾಜಿ ತಾ.ಪಂ.ಸದಸ್ಯ ಕೆ.ಎಂ. ರಾಜೇಂದ್ರ ಸ್ವಾಮಿ, ಮಾಜಿ ಗ್ರಾ.ಪಂ.ಅಧ್ಯಕ್ಷ ಕೆ.ಎಂ.ಅಶೋಕ್‌, ಸದಸ್ಯ ಜಯಶಂಕರ್‌, ಮೋಹನ್‌ಕುಮಾರ್‌, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಾಸುಪಾಲ್‌, ಲಿಂಗಣ್ಣ, ಕಮರವಾಡಿ ಮಹದೇವಪ್ಪ ಸೇರಿದಂತೆ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ