ಆ್ಯಪ್ನಗರ

ಕಾವೇರಿಯಲ್ಲಿ ಮುಳುಗಿ ಮೂವರು ಸಾವು

ತಾಲೂಕಿನ ಶಿವನಸಮದ್ರದ ವೆಸ್ಲೀ ಸೇತುವೆ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವತಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟರು.

Vijaya Karnataka 10 Jun 2019, 5:00 am
ಕೊಳ್ಳೇಗಾಲ: ತಾಲೂಕಿನ ಶಿವನಸಮದ್ರದ ವೆಸ್ಲೀ ಸೇತುವೆ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವತಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟರು.
Vijaya Karnataka Web three people die in kaveri
ಕಾವೇರಿಯಲ್ಲಿ ಮುಳುಗಿ ಮೂವರು ಸಾವು


ಬೆಂಗಳೂರು ಸುಂಕದಕಟ್ಟೆ ಬಡಾವಣೆ ನಿವಾಸಿ ಮನೋಜ್‌ಕುಮಾರ್‌(23), ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕೊತ್ತೇಗಾಲ ಗ್ರಾಮದ ಲೋಕೇಶ್‌(21), ಕುಣಿಗಲ್‌ ತಾಲೂಕಿನ ತಿಪ್ಪನಾಯಕನಹಳ್ಳಿ ಗ್ರಾಮದ ವೀಣಾ(23) ಮೃತರು.

ಇವರು ಸೇರಿದಂತೆ ಇನ್ನೂ ಕೆಲವರು ತಿ.ನರಸೀಪುರ ತಾಲೂಕು ಮುಡುಕುತೊರೆಯಲ್ಲಿ ಭಾನುವಾರ ನಡೆದ ಸ್ನೇಹಿತರೊಬ್ಬರ ಮದುವೆಗೆ ಬಂದಿದ್ದರು. ಮದುವೆ ಮುಗಿಸಿ ಶಿವನಸಮುದ್ರಕ್ಕೆ ತೆರಳಿ ವೆಸ್ಲೀ ಸೇತುವೆ ಬಳಿ ಕಾವೇರಿ ನದಿಯಲ್ಲಿ ಈಜಾಟವಾಡುತ್ತಿದ್ದರು. ಈ ಸಮಯದಲ್ಲಿ ವೀಣಾ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಹೋದ ಮನೋಜ್‌ಕುಮಾರ್‌ ಮತ್ತು ಲೋಕೇಶ್‌ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶವಗಳನ್ನು ಮೇಲೆತ್ತಿಸಿ ಉಪ ವಿಭಾಗ ಆಸ್ಪತ್ರೆಗೆ ತಂದರು. ಮರಣೋತ್ತರ ಪರೀಕ್ಷೆ ನಂತರ ಶವಗಳನ್ನು ಪೋಷಕರಿಗೆ ನೀಡಲಾಯಿತು. ಆಸ್ಪತ್ರೆ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ