ಆ್ಯಪ್ನಗರ

ಚಾಮರಾಜನಗರ: ಅರಣ್ಯಾಧಿಕಾರಿ ಮೇಲೆ ಹುಲಿ ದಾಳಿ

ಚಾಮರಾಜನಗರದ ಗುಂಡ್ಲುಪೇಟೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.

Vijaya Karnataka Web 1 Jul 2019, 4:35 pm
ಚಾಮರಾಜನಗರ: ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಮೋಟಾರ್‌ ಬೈಕ್‌ನಲ್ಲಿ ತೆರಳುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಎರಗಿದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಹುಲಿ ದಾಳಿ ಮಾಡಿದ ವರದಿಯಾಗಿದೆ.
Vijaya Karnataka Web ಗಾಯಗೊಂಡ ಅಧಿಕಾರಿ
ಗಾಯಗೊಂಡ ಅಧಿಕಾರಿ


ಗುಂಡ್ಲುಪೇಟೆ ತಾಲೂಕಿನ ಕಳ್ಳೀಪುರ ಗ್ರಾಮದ ಕೆರೆ ಹುಲಿ ದಾಳಿಯಿಂದ ವಲಯ ಅರಣ್ಯಾಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಜಿ.ಎಸ್‌. ಬೆಟ್ಟ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅಗಸೆ (30) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫೋಟೋ ತೆಗೆಯುವಾಗ ಏಕಾಏಕಿ ಪ್ರತ್ಯಕ್ಷನಾದ ಹುಲಿರಾಯ; ವೀಡಿಯೋ ನೋಡಿ

ಚಾಲಕ ಪ್ರಕಾಶ್, ಫಾರೆಸ್ಟರ್ ಬಸವರಾಜು ಜತೆ ಹುಲಿ ಹಾವಳಿ ಬಗ್ಗೆ ಗ್ರಾಮಸ್ಥರ ದೂರಿನ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆಗೆ ರಾಘವೇಂದ್ರ ತೆರಳಿದ್ದರು.

ಈ ಸಂದರ್ಭದಲ್ಲೇ ಹುಲಿ ದಾಳಿ ಮಾಡಿದ ಘಟನೆ ನಡೆದಿದೆ.

ದಾಳಿಗೆ ಒಳಗಾದ ಅಧಿಕಾರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯಲಾಗಿದೆ. ಸಿ.ಎಫ್.ಬಾಲಚಂದ್ರ, ಎಸಿಎಫ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ