ಆ್ಯಪ್ನಗರ

ಬೈಕ್‌ಗೆ ಬಸ್‌ ಡಿಕ್ಕಿ: ಇಬ್ಬರು ಸಾವು

ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ತಮಿಳುನಾಡಿನ ಮಸಣಿಗುಡಿ ಠಾಣಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.

Vijaya Karnataka 16 Jun 2019, 5:00 am
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ತಮಿಳುನಾಡಿನ ಮಸಣಿಗುಡಿ ಠಾಣಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.
Vijaya Karnataka Web two killed in bus bike collision
ಬೈಕ್‌ಗೆ ಬಸ್‌ ಡಿಕ್ಕಿ: ಇಬ್ಬರು ಸಾವು


ತಾಲೂಕಿನ ಪಂಜನಹಳ್ಳಿ ಗ್ರಾಮದ ಶಿವಲಿಂಗಯ್ಯ ಎಂಬುವವರ ಪುತ್ರ ಸೋಮು(23) ಮತ್ತು ತೆರಕಣಾಂಬಿ ಗ್ರಾಮದ ಗೋಕುಲ್‌(26) ಮೃತರು. ಪಟ್ಟಣ ಮತ್ತು ಸುತ್ತಲಿನ ಗ್ರಾಮಗಳ ಹತ್ತು ಮಂದಿ ಯುವಕರು ಊಟಿಗೆ ಪ್ರವಾಸಕ್ಕೆಂದು ಐದು ಬೈಕ್‌ನಲ್ಲಿ ತೆರಳುತ್ತಿದ್ದರು. ತಮಿಳುನಾಡಿನ ತೆಪ್ಪಕಾಡು ಪ್ರದೇಶದಲ್ಲಿ ಊಟಿ ಕಡೆಯಿಂದ ಬರುತ್ತಿದ್ದ ಮೈಸೂರು ಗ್ರಾಮಾಂತರ ವಿಭಾಗದ ಬಸ್‌ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸೋಮು ಮತ್ತು ಗೋಕುಲ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಅಲ್ಲಿನ ಠಾಣೆಗೆ ಗುಂಪಿನಲ್ಲಿದ್ದ ಯುವಕರು ವಿಷಯ ಮುಟ್ಟಿಸಿದ್ದು, ಮಸಣಿಗುಡಿ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಸಲುವಾಗಿ ಗೂಡಲೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು. ಘಟನೆ ಸಂಬಂಧ ಮಸಣಿಗುಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್‌ ಚಾಲಕ ಮತ್ತು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ