ಆ್ಯಪ್ನಗರ

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟರು.

Vijaya Karnataka 18 Jul 2019, 5:00 am
ಬೇಗೂರು(ಗುಂಡ್ಲುಪೇಟೆ): ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟರು.
Vijaya Karnataka Web two killed in tractor bike collision
ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು


ಗುಂಡ್ಲುಪೇಟೆ ತಾಲೂಕು ಬೇಗೂರು ಹೋಬಳಿ ನಾಗಣಾಪುರ ಗ್ರಾಮದ ಶಾಂತಣ್ಣ(55), ಹೊಸವೀಡು ಗ್ರಾಮದ ಪರಮೇಶ(50) ಮೃತರು.

ಮೈಸೂರು ಕಡೆಯಿಂದ ಗ್ರಾಮಕ್ಕೆ ತೆರಳಲು ಬೇಗೂರು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಬಳಿ ಬಂದಾಗ ರಾಷ್ಟ್ರೀಯ ಹೆದ್ದಾರಿ 766ರ ಪಕ್ಕದಲ್ಲಿ ಟೈರ್‌ ಪಂಚರ್‌ ಆಗಿ ನಿಂತಿದ್ದ ಟ್ರ್ಯಾಕ್ಟರ್‌ ಅನ್ನು ಗಮನಿಸದೇ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ