ಆ್ಯಪ್ನಗರ

ಕೊರೊನಾ ಮುಕ್ತ ಜಿಲ್ಲೆ, ಚಾಮರಾಜನಗರ ಜಿಲ್ಲಾಧಿಕಾರಿಗೆ ಕೇಂದ್ರ ಆರೋಗ್ಯ ಸಚಿವರ ಅಭಿನಂದನೆ

​ರಾಜ್ಯದಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿಯೇ ಕೋವಿಡ್‌-19 ಮುಕ್ತ ಜಿಲ್ಲೆಯಾಗಿ ಚಾಮರಾಜನಗರ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹರ್ಷವರ್ಧನ್‌ ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

Vijaya Karnataka 5 Jun 2020, 9:06 pm
ಚಾಮರಾಜನಗರ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರು ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಿಲ್ಲೆಯನ್ನು ಕೊರೊನಾ ಮುಕ್ತವಾಗಿಡಲು ಶ್ರಮಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.
Vijaya Karnataka Web DR MR Ravi


ರಾಜ್ಯದಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲೆ ಕೋವಿಡ್‌-19 ಮುಕ್ತ ಜಿಲ್ಲೆಯಾಗಿ ಚಾಮರಾಜನಗರ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹರ್ಷವರ್ಧನ್‌ ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರಿಗೆ ಕರೆ ಮಾಡಿ, "ನಿಮ್ಮ ಜಿಲ್ಲೆಯ ನೆರೆಯಲ್ಲಿರುವ ತಮಿಳುನಾಡು, ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿದೆ. ಹೀಗಿದ್ದರೂ ನಿಮ್ಮ ಜಿಲ್ಲೆಯನ್ನು ಹಸಿರು ವಲಯವನ್ನಾಗಿ ಜೋಪಾನ ಮಾಡಿರುವುದು ಖುಷಿ ನೀಡಿದೆ. ಇದಕ್ಕಾಗಿ ನಿಮಗೆ ಹಾಗೂ ನಿಮ್ಮ ಎಲ್ಲಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

ಈ ವಿಚಾರವನ್ನು ಜಿಲ್ಲಾಧಿಕಾರಿ ಡಾ.ಎಂ. ಆರ್‌.ರವಿ ಅವರು ಸಹ ಖಚಿತಪಡಿಸಿದ್ದಾರೆ. "ಕೇಂದ್ರ ಸಚಿವರೇ ನೇರವಾಗಿ ಕರೆ ಮಾಡಿ ಅಭಿನಂದಿಸಿದಾಗ ಅಚ್ಚರಿ ಜೊತೆಗೆ ಖುಷಿ ಆಯಿತು. ಇದಕ್ಕೆಲ್ಲಾ ಜಿಲ್ಲೆಯ ಜನತೆಯ ಸಹಕಾರ ಕಾರಣ. ಜಿಲ್ಲಾಡಳಿತದೊಂದಿಗೆ ಎಲ್ಲ ಅಧಿಕಾರಿ ವರ್ಗ, ಸಿಬ್ಬಂದಿ ಹಾಗೂ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡಿದ್ದು, ಇದರ ಫಲವಾಗಿ ಜಿಲ್ಲೆ ಇನ್ನು ಹಸಿರಾಗಿದೆ," ಎಂದು ಹರ್ಷ ವ್ಯಕ್ತಪಡಿಸಿದರು.

ದಕ್ಷಿಣ ಭಾರತದಲ್ಲಿ ಕರ್ನಾಟಕದ ಚಾಮರಾಜನಗರ ಮತ್ತು ತೆಲಂಗಾಣದ ವಾರಂಗಲ್‌ ಜಿಲ್ಲೆಗಳಲ್ಲಿ ಮಾತ್ರ ಇಲ್ಲಿಯರೆಗೆ ಯಾವುದೇ ಕೊರೊನಾ ವೈರಸ್‌ ಪ್ರಕರಣಗಳು ದೃಢಪಟ್ಟಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ