ಆ್ಯಪ್ನಗರ

ಪ್ರವಾಸೋದ್ಯಮ ಇಲಾಖೆಯಲ್ಲಿ ಶೀಘ್ರ ಹುದ್ದೆಗಳ ಭರ್ತಿ

ಪ್ರವಾಸೋದ್ಯಮ ಇಲಾಖೆಯಲ್ಲಿ ಹಲವಾರು ವರ್ಷಗಳಿಂದಲೂ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಲು ಹಣಕಾಸಿನ ಕೊರತೆ ಉಂಟಾಗಿತ್ತು ಎಂದು ಸಚಿವ ಸಿಟಿ ರವಿ ಮಾಹಿತಿ ನೀಡಿದ್ದಾರೆ.

Vijaya Karnataka Web 10 Sep 2019, 6:52 pm
ಚಾಮರಾಜನಗರ: ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ ಶೇ.64ರಷ್ಟು ಹುದ್ದೆಗಳನ್ನು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಖಾಲಿ ಇರುವ ಶೇ.69ರಷ್ಟು ಹುದ್ಧೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
Vijaya Karnataka Web ಸಿಟಿ ರವಿ
ಸಿಟಿ ರವಿ


ಗಡಿಜಿಲ್ಲೆ ಚಾಮರಾಜನಗರದಲ್ಲಿ ಪ್ರವಾಸೋಧ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಗುತ್ತಿಗೆ ಆದಾರದಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡಿಕೊಂಡು ಸದ್ಯ ನಿರ್ವಹಿಸಲಾಗುತ್ತಿದೆ ಎಂದರು.

ಹಣಕಾಸಿನ ಕೊರತೆಯೇ ಹುದ್ದೆಗಳನ್ನು ಭರ್ತಿ ಮಾಡದಿರಲು ಪ್ರಮುಖ ಕಾರಣವಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಸಿಟಿ ರವಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ