ಆ್ಯಪ್ನಗರ

ಚಾಮರಾಜನಗರದಲ್ಲಿ ವೀರಶೈವ ಲಿಂಗಾಯತ ಮಹಾಸಭೆ ಕಾರ‍್ಯಕಾರಿಣಿ ಸಭೆ

ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಘಟಕದ ಮುಂದಿನ ಕಾರ್ಯಕಾರಿಣಿ ಸಭೆ ಚಾಮರಾಜನಗರದಲ್ಲಿ ಆಯೋಜನೆ ಮಾಡಲು ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭೆ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

Vijaya Karnataka 29 Apr 2019, 5:00 am
ಚಾಮರಾಜನಗರ : ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಘಟಕದ ಮುಂದಿನ ಕಾರ್ಯಕಾರಿಣಿ ಸಭೆ ಚಾಮರಾಜನಗರದಲ್ಲಿ ಆಯೋಜನೆ ಮಾಡಲು ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭೆ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
Vijaya Karnataka Web veerashaiva lingayat general executive meeting in chamarajanagar
ಚಾಮರಾಜನಗರದಲ್ಲಿ ವೀರಶೈವ ಲಿಂಗಾಯತ ಮಹಾಸಭೆ ಕಾರ‍್ಯಕಾರಿಣಿ ಸಭೆ


ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭಾ ಭವನದಲ್ಲಿ ನಡೆದ ಮಹಾಸಭೆ ರಾಜ್ಯ ಘಟಕದ ಸಭೆಯಲ್ಲಿ ಜಿಲ್ಲೆಯ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಹೆಗ್ಗವಾಡಿಪುರ ಮಹದೇವಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿ ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ಚಾಮರಾಜನಗರ ಜಿಲ್ಲೆಯಲ್ಲಿ ಆಯೋಜನೆ ಮಾಡಬೇಕು ಎಂದು ವೀರಶೈವ ಮಹಾಸಭೆ ನೂತನ ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ಅವರಲ್ಲಿ ಮನವಿ ಮಾಡಿಕೊಂಡರು.

ಮಹಾಸಭೆ ರಾಜ್ಯ ಪರಿಷತ್‌ ಸದಸ್ಯ ಮಹದೇವಸ್ವಾಮಿ ಮಾತನಾಡಿ, ಚಾಮರಾಜನಗರ ಜಿಲ್ಲೆ ಆರ್ಥಿಕವಾಗಿ ಹಿಂದುಳಿದ ಜಿಲ್ಲೆಯಾಗಿದ್ದರೂ ಅರಣ್ಯ ಸಂಪತ್ತು ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿದ್ದು, ಜನಪದ ನಾಡು ಎಂದೂ ಬಿಂಬಿತವಾಗಿದೆ. ರಾಜ್ಯ ಘಟಕದ ಕಾರ್ಯಕಾರಿÜಣಿಯನ್ನು ಬೆಂಗಳೂರು ಕೇಂದ್ರದಲ್ಲಿ ನಡೆಸುವ ಬದಲು ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಕಾರಿಣಿ ಸಭೆಗಳನ್ನು ಆಯೋಜನೆ ಮಾಡುವುದರಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಹಾಸಭಾವನ್ನು ಸಂಘಟನೆ ಮಾಡಲು ಸಹಕಾರಿಯಾಗುತ್ತದೆ ಎಂದರು.

ಧಾರವಾಡ ಜಿಲ್ಲೆ ಸೇರಿದಂತೆ ಇತರೇ ಜಿಲ್ಲೆಯವರು ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ತಮ್ಮ ಜಿಲ್ಲೆಗಳಲ್ಲಿ ಆಯೋಜನೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅಂತಿಮವಾಗಿ ಗಡಿ ಜಿಲ್ಲೆಯ ಚಾಮರಾಜನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತರು ಇದ್ದು, ಮುಂದಿನ ತಿಂಗಳ ಕಾರ್ಯಕಾರಿಣಿಯನ್ನು ಚಾಮರಾಜನಗರದಲ್ಲಿ ನಡೆಸಲು ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ವರುಣಾ ಮಹೇಶ್‌, ಬಸವರಾಜು ಸೋಮಶೇಖರ್‌, ಗುರುಸ್ವಾಮಿ, ರುದ್ರಣ್ಣ ಹೊಸಕೇರಿ, ಹರೀಶಾರಾಧ್ಯ, ಸಿ. ಮಲ್ಲಿಕಾರ್ಜುನಯ್ಯ, ಡಾ. ಎಸ್‌. ನಂಜುಂಡೇಶ್‌, ಉಮೇಶ್‌ ಬಣಕಾರ್‌, ಆರ್‌.ಆರ್‌. ಹೀರೇಮಠ್‌, ಜಿಲ್ಲೆಯಿಂದ ವೀರಶೈವ ಮಹಾಸಭೆ ಜಿಲ್ಲಾಘಟಕದ ನಿರ್ದೇಶಕ ಸಿದ್ದೇಶಬಾಬು, ಎಂಸಿಎಸ್‌ ಮಹದೇವಸ್ವಾಮಿ, ಶಿವಕುಮಾರ್‌, ಟಗರಪುರ ಉಮೇಶ್‌ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ