ಸಂತೇಮರಹಳ್ಳಿ : ಸ್ಥಳೀಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಡಿ ಗ್ರೂಪ್ ನೌಕರನೊಬ್ಬ ತಮಗೆ ಇಲಾಖೆ ಸಿಬ್ಬಂದಿಗಳಿಂದ ಕಿರುಕುಳ ಹಾಗೂ 7 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಕಚೇರಿ ಮುಂದೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿರುವ ಪ್ರಕರಣ ಸಂತೇಮರಹಳ್ಳಿಯಲ್ಲಿ ಶನಿವಾರ ನಡೆದಿದೆ.
ಡಿ.ಗ್ರೂಫ್ ನೌಕರ ರಾಜಶೇಖರ ಎಂಬುವವವರೇ ಆತ್ಮಹತ್ಯೆಗೆ ಯತ್ನಿಸಿದವರು. ಶನಿವಾರ ಬೆಳಗ್ಗೆ ಕಚೇರಿ ಆವರಣದಲ್ಲೇ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಮೈಮೇಲೆ ಸಿಮೇಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕಂಡು ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ.
ಈ ಸಂದರ್ಭ ರಾಜಶೇಖರ ಮಾತನಾಡಿ, ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ 5 ವರ್ಷಗಳಿಂದ ನಾನು ಕೆಲಸ ನಿರ್ವಹಿಸುತ್ತಿದ್ದು. ಕಳೆದ 7 ತಿಂಗಳಿಂದ ವೇತನ ನೀಡಿಲ್ಲ. ಇದರ ಜತೆಗೆ ಸಿಬ್ಬಂದಿಗಳು ತಮಗೆ ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ, ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಜಯಶೀಲಾ ಅವರ ಬಳಿ ತಮ್ಮ ಅಳಲು ತೋಡಿಕೊಂಡರು.
ನೌಕರನ ಮನವಿಗೆ ಪ್ರತಿಕ್ರಿಯಿಸಿದ ಜಯಶೀಲಾ ಅವರು, ಕೂಡಲೇ ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ, ಕೂಡಲೇ ಈಗ ಬಿಡುಗಡೆಯಾಗಿರುವ 2 ತಿಂಗಳ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಡಿ.ಗ್ರೂಫ್ ನೌಕರ ರಾಜಶೇಖರ ಎಂಬುವವವರೇ ಆತ್ಮಹತ್ಯೆಗೆ ಯತ್ನಿಸಿದವರು. ಶನಿವಾರ ಬೆಳಗ್ಗೆ ಕಚೇರಿ ಆವರಣದಲ್ಲೇ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಮೈಮೇಲೆ ಸಿಮೇಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕಂಡು ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ.
ಈ ಸಂದರ್ಭ ರಾಜಶೇಖರ ಮಾತನಾಡಿ, ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ 5 ವರ್ಷಗಳಿಂದ ನಾನು ಕೆಲಸ ನಿರ್ವಹಿಸುತ್ತಿದ್ದು. ಕಳೆದ 7 ತಿಂಗಳಿಂದ ವೇತನ ನೀಡಿಲ್ಲ. ಇದರ ಜತೆಗೆ ಸಿಬ್ಬಂದಿಗಳು ತಮಗೆ ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ, ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಜಯಶೀಲಾ ಅವರ ಬಳಿ ತಮ್ಮ ಅಳಲು ತೋಡಿಕೊಂಡರು.
ನೌಕರನ ಮನವಿಗೆ ಪ್ರತಿಕ್ರಿಯಿಸಿದ ಜಯಶೀಲಾ ಅವರು, ಕೂಡಲೇ ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ, ಕೂಡಲೇ ಈಗ ಬಿಡುಗಡೆಯಾಗಿರುವ 2 ತಿಂಗಳ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.