ಆ್ಯಪ್ನಗರ

ವಾಹನದ ಮೇಲೆ ಕಾಡಾನೆ ದಾಳಿಗೆ ಯತ್ನ

ಬಂಡೀಪುರ ಅರಣ್ಯದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ತಾಯಿ ಆನೆಯೊಂದು ವಾಹನದ ಮೇಲೆ ದಾಳಿ ನಡೆಸಲು ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Vijaya Karnataka 22 Aug 2019, 5:00 am
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಘಟನೆ | ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌
Vijaya Karnataka Web wild elephant attempt to attack a vehicle
ವಾಹನದ ಮೇಲೆ ಕಾಡಾನೆ ದಾಳಿಗೆ ಯತ್ನ


ಚಾಮರಾಜನಗರ:
ಬಂಡೀಪುರ ಅರಣ್ಯದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ತಾಯಿ ಆನೆಯೊಂದು ವಾಹನದ ಮೇಲೆ ದಾಳಿ ನಡೆಸಲು ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮರಿ ಆನೆಯೊಂದಿಗೆ ತಾಯಿ ಆನೆಯೂ ಸೇರಿದಂತೆ ಮತ್ತೊಂದು ಆನೆ ಹೆದ್ದಾರಿ ದಾಟುತ್ತಿದ್ದವು. ವಾಹನವು ಸದ್ದು ಮಾಡಿದ್ದರಿಂದ ಹೆದ್ದಾರಿಯನ್ನು ದಾಟಿ ಮುಂದೆ ಹೋಗುತ್ತಿದ್ದ ಹೆಣ್ಣಾನೆ ಕೋಪಗೊಂಡು ದಿಢೀರನೆ ಹಿಂದಿರುಗಿ ಓಡಿ ಬಂದು ವಾಹನವನ್ನು ಹಿಂಬಾಲಿಸಿ ದಾಳಿಗೆ ಯತ್ನಿಸಿದೆ. ಈ ಸಂದರ್ಭದಲ್ಲಿ ವಾಹನದಲ್ಲಿ ಇದ್ದವರು ಕೂಗಿಕೊಂಡಿದ್ದಾರೆ. ಚಾಲಕ ತಕ್ಷ ಣ ವಾಹನವನ್ನು ವೇಗವಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಬಳಿಕ ಆನೆಯು ಮರಿಯತ್ತ ಹೋಗಿದೆ. ಇದರಿಂದ ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಮೊಬೈಲ್‌ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ