ಯಳಂದೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ದೂರುಗಳ ಸಭೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.
ನಂತರ ಗೌತಮ್ ಬಡಾವಣೆ ನಿವಾಸಿ ನಾಗರಾಜು ಮಾತನಾಡಿ, ತಾಲೂಕು ಕಚೇರಿ, ಸಬ್ ರಿಜಿಸ್ಟರ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳಲ್ಲಿ ಸರಿಯಾದ ಸಮಯದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಆಗುತ್ತಿಲ್ಲ. ತಿಂಗಳುಗಟ್ಟಲೇ ಅಲೆದಾಡುವಂತಾಗಿದೆ. ಸಾರ್ವಜನಿಕರು ಕಚೇರಿಗೆ ಹೋದಂತ ಸಮಯದಲ್ಲಿ ಒಬ್ಬ ಅಧಿಕಾರಿ ಇದ್ದರೆ ಮತ್ತೊಬ್ಬ ಅಧಿಕಾರಿ ಇರುವುದಿಲ್ಲ, ಆದ್ದರಿಂದ ಸಾರ್ವಜನಿಕರನ್ನು ಇಂದು ನಾಳೆ ಬನ್ನಿ ಎಂದು ದಿನನಿತ್ಯ ಹೇಳಿ ಕಳುಹಿಸುತ್ತಾರೆ. ಆದ್ದರಿಂದ ಅಧಿಕಾರಿಗಳು ಕಚೇರಿಗೆ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ದೂರಿದರು.
ವೈ.ಕೆ. ಮೋಳೆ ನಂಜುಂಡಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ಚಿಲ್ಲರೆ ಅಂಗಡಿ ಹಾಗೂ ಮನೆಗಳಿಗೆ ಬಾರ್ ಮಾಲೀಕರು ತಮ್ಮ ಸಿಬ್ಬಂದಿಗಳ ಮೂಲಕ ದಿನ ನಿತ್ಯ ಹಗಲು ವೇಳೆಯಲ್ಲಿ ರಾಜಾರೋಷವಾಗಿ ಮದ್ಯ ಸಾಗಾಣಿಕೆ ಮಾಡಲಾಗುತ್ತಿದೆ. ಗ್ರಾಮಿಣ ಭಾಗದ ಜನತೆ ಮಧ್ಯದಂತಹ ದುಶ್ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಯಾವುದೇ ಪ್ರಯೊಜನವಾಗಿಲ್ಲ ಆದ್ದರಿಂದ ಇದನ್ನು ತಡೆಗಟ್ಟವಲ್ಲಿ ಮುಂದಾಗಬೇಕು ಎಂದರು.
. ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿ ಜಿ.ಎನ್. ಶ್ರೀಕಾಂತ್ಮಾತನಾಡಿ, ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳ ಚರ್ಚಿಸಿ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಕೆಲವು ದೂರುಗಳನ್ನು ಮೌಖಿಕವಾಗಿ ಹೇಳಿದರೆ ಸಾಕು ಇನ್ನು ಕೆಲ ದೂರುಗಳಿಗೆ ದಾಖಲೆ ನೀಡಬೇಕು, ಹಾಗಿದ್ದಲ್ಲಿ ಮಾತ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮದ್ದೂರು ಗ್ರಾಮದ ಉಮಾಶಂಕರ್ ಹಾಗೂ ದೂರುದಾರರು, ಭ್ರಷ್ಟಾಚಾರ ನಿಗ್ರಹ ದಳ ಸಿಬ್ಬಂದಿಗಳು ಹಾಜರಿದ್ದರು.
ನಂತರ ಗೌತಮ್ ಬಡಾವಣೆ ನಿವಾಸಿ ನಾಗರಾಜು ಮಾತನಾಡಿ, ತಾಲೂಕು ಕಚೇರಿ, ಸಬ್ ರಿಜಿಸ್ಟರ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳಲ್ಲಿ ಸರಿಯಾದ ಸಮಯದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಆಗುತ್ತಿಲ್ಲ. ತಿಂಗಳುಗಟ್ಟಲೇ ಅಲೆದಾಡುವಂತಾಗಿದೆ. ಸಾರ್ವಜನಿಕರು ಕಚೇರಿಗೆ ಹೋದಂತ ಸಮಯದಲ್ಲಿ ಒಬ್ಬ ಅಧಿಕಾರಿ ಇದ್ದರೆ ಮತ್ತೊಬ್ಬ ಅಧಿಕಾರಿ ಇರುವುದಿಲ್ಲ, ಆದ್ದರಿಂದ ಸಾರ್ವಜನಿಕರನ್ನು ಇಂದು ನಾಳೆ ಬನ್ನಿ ಎಂದು ದಿನನಿತ್ಯ ಹೇಳಿ ಕಳುಹಿಸುತ್ತಾರೆ. ಆದ್ದರಿಂದ ಅಧಿಕಾರಿಗಳು ಕಚೇರಿಗೆ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ದೂರಿದರು.
ವೈ.ಕೆ. ಮೋಳೆ ನಂಜುಂಡಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ಚಿಲ್ಲರೆ ಅಂಗಡಿ ಹಾಗೂ ಮನೆಗಳಿಗೆ ಬಾರ್ ಮಾಲೀಕರು ತಮ್ಮ ಸಿಬ್ಬಂದಿಗಳ ಮೂಲಕ ದಿನ ನಿತ್ಯ ಹಗಲು ವೇಳೆಯಲ್ಲಿ ರಾಜಾರೋಷವಾಗಿ ಮದ್ಯ ಸಾಗಾಣಿಕೆ ಮಾಡಲಾಗುತ್ತಿದೆ. ಗ್ರಾಮಿಣ ಭಾಗದ ಜನತೆ ಮಧ್ಯದಂತಹ ದುಶ್ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಯಾವುದೇ ಪ್ರಯೊಜನವಾಗಿಲ್ಲ ಆದ್ದರಿಂದ ಇದನ್ನು ತಡೆಗಟ್ಟವಲ್ಲಿ ಮುಂದಾಗಬೇಕು ಎಂದರು.
. ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿ ಜಿ.ಎನ್. ಶ್ರೀಕಾಂತ್ಮಾತನಾಡಿ, ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳ ಚರ್ಚಿಸಿ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಕೆಲವು ದೂರುಗಳನ್ನು ಮೌಖಿಕವಾಗಿ ಹೇಳಿದರೆ ಸಾಕು ಇನ್ನು ಕೆಲ ದೂರುಗಳಿಗೆ ದಾಖಲೆ ನೀಡಬೇಕು, ಹಾಗಿದ್ದಲ್ಲಿ ಮಾತ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮದ್ದೂರು ಗ್ರಾಮದ ಉಮಾಶಂಕರ್ ಹಾಗೂ ದೂರುದಾರರು, ಭ್ರಷ್ಟಾಚಾರ ನಿಗ್ರಹ ದಳ ಸಿಬ್ಬಂದಿಗಳು ಹಾಜರಿದ್ದರು.