ಆ್ಯಪ್ನಗರ

ಸಮನ್ಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಗೂಡ್ಸ್‌ ಆಟೋ ಅಪಘಾತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಿಂದ ಬಂದ ಸಮನ್ಸ್‌ಗೆ ಹೆದರಿ ಯುವಕನೊಬ್ಬ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 30 Oct 2018, 5:00 am
ಸಂತೇಮರಹಳ್ಳಿ : ಗೂಡ್ಸ್‌ ಆಟೋ ಅಪಘಾತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಿಂದ ಬಂದ ಸಮನ್ಸ್‌ಗೆ ಹೆದರಿ ಯುವಕನೊಬ್ಬ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web young man commits suicide in fear of summons
ಸಮನ್ಸ್‌ಗೆ ಹೆದರಿ ಯುವಕ ಆತ್ಮಹತ್ಯೆ


ಸಂತೇಮರಹಳ್ಳಿ ಸಮೀಪದ ಗೂಳೀಪುರ ಗ್ರಾಮದ ಮಹೇಶ್‌(25) ಮೃತ. ಈತ ಆಟೋ ಚಾಲಕನಾಗಿದ್ದು, 2 ವರ್ಷದ ಹಿಂದೆ ಗೂಡ್ಸ್‌ ಆಟೋ ಅಪಘಾತ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ದೂರಿನ ಹಿನ್ನೆಲೆಯಲ್ಲಿ ಭಾನುವಾರ ನ್ಯಾಯಾಲಯದಿಂದ ಸಮನ್ಸ್‌ ಬಂದಿದೆ. ಇದಕ್ಕೆ ಹೆದರಿದ ಮಹೇಶ್‌ ಮನೆಯ ಹಿಂಭಾಗದಲ್ಲಿರುವ ಹುಣಸೆ ಮರಕ್ಕೆ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಮಸಮುದ್ರ ಠಾಣೆ ಪಿಎಸ್‌ಐ ಪುಟ್ಟಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಯುವಕನ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ರಾಮಸಮುದ್ರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ