ಆ್ಯಪ್ನಗರ

3 ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ದ ಕೆ.ಅಣ್ಣಾಮಲೈ ವಿರುದ್ಧ ಕೇಸ್‌..!

ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ತಮಿಳುನಾಡಿನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾಕ್‌ಡೌನ್‌ ನಿರ್ಬಂಧ ಉಲ್ಲಂಘಿಸಿ ಕೊಯಮತ್ತೂರಿನಲ್ಲಿ ಕಾನೂನುಬಾಹಿರ ಸಭೆ ನಡೆಸಿದಕ್ಕಾಗಿ ಕೇಸ್‌ ದಾಖಲಾಗಿದೆ

TIMESOFINDIA.COM 28 Aug 2020, 5:14 pm
ಕೊಯಮತ್ತೂರು: ಕೆಲ ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ತಮಿಳುನಾಡಿನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಯಮತ್ತೂರಿನಲ್ಲಿ ಕಾನೂನುಬಾಹಿರ ಸಭೆ ನಡೆಸಿದಕ್ಕಾಗಿ ಕೆ.ಅಣ್ಣಾಮಲೈ ಸೇರಿ ಪಕ್ಷದ ಕೆಲ ಕಾರ್ಯಕರ್ತರ ಮೇಲೆ ಕೊಯಮತ್ತೂರು ನಗರ ಪೊಲೀಸರು ಕೇಸ್‌ ದಾಖಲಿಸಿದ್ದಾರೆ.
Vijaya Karnataka Web coimbatore police register case against former ips officer k annamalai and bjp functionaries
3 ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ದ ಕೆ.ಅಣ್ಣಾಮಲೈ ವಿರುದ್ಧ ಕೇಸ್‌..!


ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರನ್ನು ಪಕ್ಷದ ಕಾರ್ಯಕರ್ತರು ಸ್ವಾಗತಿಸಿದ್ದರು. ಆದರೆ, ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ಪಕ್ಷದ ಕಚೇರಿಯಲ್ಲಿ ಬಹಳಷ್ಟು ಜನ ಕಾರ್ಯಕರ್ತರು ಸೇರಿರುವುದು ವರದಿಯಾಗಿದೆ.

ಅದಲ್ಲದೇ ಪಕ್ಷದ ಕಚೇರಿ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಕೂಡ ಲಾಕ್‌ಡೌನ್‌ ಉಲ್ಲಂಘನೆಯಾಗಿದೆ. ನಂತರ, ಕೆ.ಅಣ್ಣಾಮಲೈ ತಮ್ಮ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಉದ್ದೇಶಿಸಿ ಮಾತನಾಡುವ ಮೂಲಕ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರವಾದದ ಪ್ರವಾಹಕ್ಕೆ ಸೇರಿದ ಅಣ್ಣಾಮಲೈ: ಕರ್ನಾಟಕ ಸಿಂಗಂ ಹೆಜ್ಜೆಯ ಜಾಡು ಅರಸುತ್ತಾ!

ಸಬ್‌ ಇನ್ಸ್‌ಪೆಕ್ಟರ್ ಸುಗನ್ಯಾ ಅವರು ನೀಡಿದ ದೂರಿನ ಆಧಾರದ ಮೇಲೆ, ಕತ್ತೂರು ಪೊಲೀಸರು ಕೆ.ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್.ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರವಾದ, ಅಭಿವೃದ್ಧಿ ಮೆಚ್ಚಿ ಬಂದಿದ್ದೇನೆ: ಬಿಜೆಪಿಗೆ ಸೇರ್ಪಡೆಗೊಂಡ ಅಣ್ಣಾಮಲೈ!

ಕೆ.ಅಣ್ಣಾಮಲೈ ಹಾಗೂ ಇತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಅಣ್ಣಾಮಲೈ, ರಾಜ್ಯ ಬಿಜೆಪಿ ನಾಯಕರಿಂದ ಸ್ವಾಗತ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ