ಆ್ಯಪ್ನಗರ

ಪ್ರಧಾನಿ ಮೋದಿಯನ್ನು ಹೊಗಳಿದ ಶಾಸಕನಿಗೆ ಗೇಟ್‌ಪಾಸ್‌ ನೀಡಿದ ಡಿಎಂಕೆ!

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಹೊಗಳಿದ್ದ ಚೆನ್ನೈನ ತೌಸಂಡ್‌ ಲೈಟ್‌ ಕ್ಷೇತ್ರದ ಶಾಸಕ ಕು.ಕ. ಸೆಲ್ವಂ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಮೋದಿ ನಡೆಸುತ್ತಿರುವ ಪ್ರಯತ್ನಗಳಿಗೆ ಶುಭ ಹಾರೈಸಿದ್ದರು.

TIMESOFINDIA.COM 5 Aug 2020, 6:01 pm

ಚೆನ್ನೈ: ದಿಲ್ಲಿಗೆ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿಯಾಗಿದ್ದ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದ ಡಿಎಂಕೆ ಶಾಸಕ ಕು.ಕ. ಸೆಲ್ವಂರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಜೊತೆಗೆ ಅವರಿಗೆ ಶೋಕಾಸ್‌ ನೋಟಿಸ್‌ ಕೂಡ ಜಾರಿ ಮಾಡಲಾಗಿದೆ.
Vijaya Karnataka Web Ku Ka Selvam


ಚೆನ್ನೈನ ತೌಸಂಡ್‌ ಲೈಟ್‌ ಕ್ಷೇತ್ರದ ಶಾಸಕ ಕು.ಕ. ಸೆಲ್ವಂ ನಡ್ಡಾರನ್ನು ಭೇಟಿಯಾಗಿದ್ದರಿಂದ ಮಂಗಳವಾರ ಪಕ್ಷದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಇದಾದ ಬೆನ್ನಿಗೆ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಕೂಡ ಹರಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಗೇಟ್‌ ಪಾಸ್‌ ನೀಡಿರುವ ಪಕ್ಷಾಧ್ಯಕ್ಷ ಎಂ.ಕೆ. ಸ್ಟಾಲಿನ್‌, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನಿಮ್ಮಿಂದ ಯಾಕೆ ಹಿಂಪಡೆಯಬಾರದು ಎಂದು ಕೇಳಿ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇನ್ನು ಭೇಟಿ ಬಗ್ಗೆ ಬಿಜೆಪಿ ಏನೂ ಹೇಳಿಲ್ಲ. ಸೆಲ್ವಂ ಕೂಡ ತಾವು ಬಿಜೆಪಿ ಸೇರಲ್ಲ ಎಂದು ಹೇಳುತ್ತಿದ್ದಾರೆ. ಹೀಗಿದ್ದೂ ಪಕ್ಷದ ಪ್ರಧಾನ ಕಚೇರಿ ಕಾರ್ಯದರ್ಶಿ ಹಾಗೂ ಪಕ್ಷದ ಪ್ರಧಾನ ಕಚೇರಿ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ಅವರನ್ನು ಕಿತ್ತೊಗೆಯಲಾಗಿದೆ.

ತಮ್ಮ ಕ್ಷೇತ್ರದಲ್ಲಿರುವ ನಂಗಂಬಕ್ಕಮ್‌ ರೈಲ್ವೇ ನಿಲ್ದಾಣದಲ್ಲಿ ಲಿಫ್ಟ್‌ ಅಳವಡಿಸುವಂತೆ ಮನವಿ ಸಲ್ಲಿಸಲು ನಾನು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿಯಾಗಲು ಹೋಗಿದ್ದೆ. ಇನ್ನು ಅಯೋಧ್ಯೆ ರೀತಿಯಲ್ಲಿ ರಾಮೇಶ್ವರಂ ಅಭಿವೃದ್ಧಿಗೊಳಿಸುವಂತೆ ಕೋರಲು ನಡ್ಡಾರನ್ನು ಭೇಟಿಯಾಗಿದ್ದೆ ಎಂದು ಶಾಸಕರು ಹೇಳಿದ್ದರು.

ತ್ರಿಭಾಷಾ ನೀತಿಯನ್ನು ತಮಿಳುನಾಡು ಒಪ್ಪಲ್ಲ: ಮೋದಿಗೆ ಸಿಎಂ ಪಳನಿಸ್ವಾಮಿ ಮನವಿ

ಜೊತೆಗೆ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಹೊಗಳಿದ್ದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಮೋದಿ ನಡೆಸುತ್ತಿರುವ ಪ್ರಯತ್ನಗಳಿಗೆ ಶುಭ ಹಾರೈಸಿದ್ದರು.

ಇಷ್ಟಲ್ಲದೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸಬೇಕೆಂದು ಒತ್ತಾಯಿಸಿದ್ದರು. ಪವಿತ್ರ ಸ್ತೋತ್ರವಾದ ಕಾಂತಾ ಸಷ್ಟಿ ಕವಾಸಂ ಅನ್ನು ಅವಮಾನಿಸಿದ ಜನರ ಕೃತ್ಯವನ್ನು ಸ್ಟಾಲಿನ್ ಖಂಡಿಸಬೇಕು ಹಾಗೂ 'ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಸ್ಟಾಲಿನ್ ಕಡಿದುಕೊಳ್ಳಬೇಕು' ಎಂದು ಆಗ್ರಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ