ಆ್ಯಪ್ನಗರ

'ನಿವಾರ್'ಣೆಗೆ ಪ್ರಾರ್ಥನೆ: ಮಧ್ಯರಾತ್ರಿ 2 ಗಂಟೆಗೆ ಅಪ್ಪಳಿಸಲಿದೆ ಭೀಕರ ಚಂಡಮಾರುತ!

ನಿವಾರ್ ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಸಮೀಪಕ್ಕೆ ಬಂದಿದ್ದು, ಮಧ್ಯರಾತ್ರಿ ಎರಡು ಗಂಟೆಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ಭೀಕರ ಚಂಡಮಾರುತವನ್ನು ಎದುರಿಸಲು ನಮ್ಮ ತಂಡ ಸಿದ್ಧವಾಗಿದೆ ಎಂದು ಎನ್‌ಡಿಆರ್‌ಎಫ್ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಹೇಳಿದ್ದಾರೆ.

Vijaya Karnataka Web 25 Nov 2020, 9:54 pm
ಚೆನ್ನೈ: ನಿವಾರ್ ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಸಮೀಪಕ್ಕೆ ಬಂದಿದ್ದು, ಮಧ್ಯರಾತ್ರಿ ಎರಡು ಗಂಟೆಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.
Vijaya Karnataka Web nivar
ನಿವಾರ್ ಚಂಡಮಾರತ


ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDRF)ದ ಮುಖ್ಯಸ್ಥ ಎಸ್‌ಎಸ್ ಪ್ರಧಾನ್, ಮಧ್ಯರಾತ್ರಿ 2 ಗಂಟೆಗೆ ನಿವಾರ್ ಚಂಡಮಾರುತ ತನ್ನ ಸಂಪೂರ್ಣ ಶಕ್ತಿಯೊಂದಿಗೆ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಎರಡೂ ರಾಜ್ಯಗಳ ಕರಾವಳಿ ಪ್ರದೇಶಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಭೀಕರ ಚಂಡಮಾರುತವನ್ನು ಎದುರಿಸಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದೆ ಎಂದು ಎಸ್‌ಎನ್ ಪ್ರಧಾನ್ ಭರವಸೆ ನೀಡಿದ್ದಾರೆ.

ನಿವಾರ್‌ ಚಂಡಾಮಾರು: ತಮಿಳುನಾಡಿನ 13 ಜಿಲ್ಲೆಗಳಲ್ಲಿ ನ.26ರಂದು ಸಾರ್ವತ್ರಿಕ ರಜೆ!

ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಾಚರಣೆಗಳಲ್ಲಿ ನಮ್ಮ ತಂಡ ನಿರತವಾಗಲಿದ್ದು, ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಎಸ್‌ಎನ್ ಪ್ರಧಾನ್ ಸ್ಪಷ್ಟಪಡಿಸಿದ್ದಾರೆ.


ಕರ್ನಾಟಕದಲ್ಲೂ ಮುಂಜಾಗ್ರತಾ ಕ್ರಮ:
ಇನ್ನು ನಿವಾರ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀಳಲಿದ್ದು, ರಾಜ್ಯ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಿವಾರ್ ಚಂಡಮಾರುತ: ಕರ್ನಾಟಕದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಅಂದ್ರು ಸಿಎಂ ಯಡಿಯೂರಪ್ಪ

ನಮ್ಮ ರಾಜ್ಯದಲ್ಲಿಯೂ ಭಾರೀ ಮಳೆಯಾಗುವ ಸಂಭವವಿದ್ದು, ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರದಿಂದ ಇರುವಂತೆ ಸೂಚಿಸುವಂತೆ ತಿಳಿಸಿದ್ದೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ