ಆ್ಯಪ್ನಗರ

ಮಾಜಿ ಸಚಿವ ರವಿಶಂಕರ್‌ ಪ್ರಸಾದ್‌ ತಮಿಳುನಾಡು ನೂತನ ರಾಜ್ಯಪಾಲ?

ಇತ್ತೀಚಿನ ನಡೆದ ಸಚಿವ ಸಂಪುಟ ವಿಸ್ತರಣೆಗೆ ಮೊದಲು ರಾಜೀನಾಮೆ ನೀಡಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಖಾತೆ ಸಚಿವರಾಗಿದ್ದ ರವಿಶಂಕರ್‌ ಪ್ರಸಾದ್‌ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

Vijaya Karnataka Web 10 Jul 2021, 11:24 pm

ಹೈಲೈಟ್ಸ್‌:

  • ಇತ್ತೀಚಿನ ನಡೆದ ಸಚಿವ ಸಂಪುಟ ವಿಸ್ತರಣೆಗೆ ಮೊದಲು ರಾಜೀನಾಮೆ ನೀಡಿದ್ದ ರವಿಶಂಕರ್‌ ಪ್ರಸಾದ್‌
  • ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಖಾತೆ ಸಚಿವರಾಗಿದ್ದ ರವಿಶಂಕರ್‌ ಪ್ರಸಾದ್‌
  • ರವಿಶಂಕರ್‌ ಪ್ರಸಾದ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ravi Shankar Prasad
ಹೊಸದಿಲ್ಲಿ: ತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರನ್ನು ನೇಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಖಾತೆ ಸಚಿವರಾಗಿದ್ದ ಅವರು ಇತ್ತೀಚಿನ ನಡೆದ ಸಚಿವ ಸಂಪುಟ ವಿಸ್ತರಣೆಗೆ ಮೊದಲು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಸಾಕಷ್ಟು ಜನರ ಹುಬ್ಬೇರಿಸಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಅಥವಾ ರಾಜ್ಯಪಾಲರ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.

ಈ ಕ್ರಮವಾಗಿ ತಮಿಳುನಾಡಿನ ರಾಜ್ಯಪಾಲರನ್ನಾಗಿ ರವಿಶಂಕರ್‌ ಪ್ರಸಾದ್‌ ಅವರನ್ನು ನೇಮಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ. ಹಾಲಿ ತಮಿಳುನಾಡು ರಾಜ್ಯಪಾಲ ಭನ್ವರಿಲಾಲ್‌ ಪುರೋಹಿತ್‌ ಅವರು ಬಿಜೆಪಿ ಕೇಂದ್ರ ನಾಯಕರ ಸೂಚನೆಯಂತೆ ಶನಿವಾರ ದಿಲ್ಲಿಗೆ ತೆರಳಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಮುಂದುವರಿದ ಕೇಂದ್ರ ಸಚಿವರ ರಾಜೀನಾಮೆ ಪರ್ವ, ರವಿಶಂಕರ್‌ ಪ್ರಸಾದ್, ಪ್ರಕಾಶ್‌ ಜಾವಡೇಕರ್‌ ರಿಸೈನ್‌
ಕೆಲವೇ ದಿನಗಳ ಹಿಂದೆ ಕೇಂದ್ರ ಸಚಿವರಾಗಿದ್ದ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಶನಿವಾರ ಅವರು ಹುದ್ದೆ ವಹಿಸಿಕೊಳ್ಳಲು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದೇ ಹೊತ್ತಲ್ಲಿ ಪಕ್ಕದ ತಮಿಳುನಾಡಿನಲ್ಲಿಯೂ ಮಹತ್ವದ ಬೆಳವಣಿಗೆ ನಡೆಯುತ್ತಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ