ಚೆನ್ನೈ: ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯ ಆಚರಣೆಗೆ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೇತೃತ್ವದ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ ಸರಕಾರದ ಈ ನಿರ್ಧಾರಕ್ಕೆ ಪರ-ವಿರೋಧ ವ್ಯಕ್ತವಾಗಿದೆ.
ಕೆಲವರು ಕ್ರೀಡೆಗೆ ಅನುಮತಿ ನೀಡಬೇಕೆಂದು ವಾದಿಸಿದ್ದರೆ, ಇನ್ನೂ ಕೆಲವರು ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಜಲ್ಲಿಕಟ್ಟು ಮುಂದೂಡುವಂತೆ ಒತ್ತಾಯಿಸಿದ್ದರು. ಆದರೆ ಸರಕಾರ, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ನಿಯಮ ವಿಧಿಸುವ ಮೂಲಕ ಮುಂದಿನ ತಿಂಗಳು ಸಂಕ್ರಾಂತಿ ಸಂದರ್ಭದಲ್ಲಿ ನಡೆಯಲಿರುವ ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ ನೀಡಿದೆ.
ಕ್ರೀಡೆಯಲ್ಲಿ ಗರಿಷ್ಠ 300 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕ್ರೀಡೆ ನಡೆಯುವ ಸ್ಥಳಗಳಿಗೆ ಪ್ರವೇಶಿಸುವ ಮೊದಲು ವೀಕ್ಷಕರನ್ನು ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಲಾಗುತ್ತದೆ. ಕೋವಿಡ್-19 ಸೋಂಕು ಪರೀಕ್ಷೆಯ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಸರಕಾರದ ಅಧಿಕೃತ ಪ್ರಯೋಗಾಲಯಗಳಲ್ಲಿ ಕೋವಿಡ್- 19 ಪರೀಕ್ಷೆ ಮಾಡಿಸಬೇಕು ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಲವರು ಕ್ರೀಡೆಗೆ ಅನುಮತಿ ನೀಡಬೇಕೆಂದು ವಾದಿಸಿದ್ದರೆ, ಇನ್ನೂ ಕೆಲವರು ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಜಲ್ಲಿಕಟ್ಟು ಮುಂದೂಡುವಂತೆ ಒತ್ತಾಯಿಸಿದ್ದರು. ಆದರೆ ಸರಕಾರ, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ನಿಯಮ ವಿಧಿಸುವ ಮೂಲಕ ಮುಂದಿನ ತಿಂಗಳು ಸಂಕ್ರಾಂತಿ ಸಂದರ್ಭದಲ್ಲಿ ನಡೆಯಲಿರುವ ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ ನೀಡಿದೆ.
ಕ್ರೀಡೆಯಲ್ಲಿ ಗರಿಷ್ಠ 300 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕ್ರೀಡೆ ನಡೆಯುವ ಸ್ಥಳಗಳಿಗೆ ಪ್ರವೇಶಿಸುವ ಮೊದಲು ವೀಕ್ಷಕರನ್ನು ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಲಾಗುತ್ತದೆ. ಕೋವಿಡ್-19 ಸೋಂಕು ಪರೀಕ್ಷೆಯ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಸರಕಾರದ ಅಧಿಕೃತ ಪ್ರಯೋಗಾಲಯಗಳಲ್ಲಿ ಕೋವಿಡ್- 19 ಪರೀಕ್ಷೆ ಮಾಡಿಸಬೇಕು ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.