ಆ್ಯಪ್ನಗರ

ಕೊರೊನಾಂತಕದ ಮಧ್ಯೆ ಜಲ್ಲಿಕಟ್ಟು ಕ್ರೀಡೆಗೆ ಷರತ್ತುಬದ್ಧ ಅನುಮತಿ ನೀಡಿದ ತಮಿಳುನಾಡು ಸರಕಾರ

ಕೆಲವರು ಕ್ರೀಡೆಗೆ ಅನುಮತಿ ನೀಡಬೇಕೆಂದು ವಾದಿಸಿದ್ದರೆ, ಇನ್ನೂ ಕೆಲವರು ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಜಲ್ಲಿಕಟ್ಟು ಮುಂದೂಡುವಂತೆ ತಮಿಳುನಾಡು ಸರಕಾರವನ್ನು ಒತ್ತಾಯಿಸಿದ್ದರು.

Agencies 23 Dec 2020, 7:58 pm
ಚೆನ್ನೈ: ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯ ಆಚರಣೆಗೆ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೇತೃತ್ವದ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ ಸರಕಾರದ ಈ ನಿರ್ಧಾರಕ್ಕೆ ಪರ-ವಿರೋಧ ವ್ಯಕ್ತವಾಗಿದೆ.
Vijaya Karnataka Web jallikattu


ಕೆಲವರು ಕ್ರೀಡೆಗೆ ಅನುಮತಿ ನೀಡಬೇಕೆಂದು ವಾದಿಸಿದ್ದರೆ, ಇನ್ನೂ ಕೆಲವರು ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಜಲ್ಲಿಕಟ್ಟು ಮುಂದೂಡುವಂತೆ ಒತ್ತಾಯಿಸಿದ್ದರು. ಆದರೆ ಸರಕಾರ, ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ನಿಯಮ ವಿಧಿಸುವ ಮೂಲಕ ಮುಂದಿನ ತಿಂಗಳು ಸಂಕ್ರಾಂತಿ ಸಂದರ್ಭದಲ್ಲಿ ನಡೆಯಲಿರುವ ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ ನೀಡಿದೆ.

ಕ್ರೀಡೆಯಲ್ಲಿ ಗರಿಷ್ಠ 300 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕ್ರೀಡೆ ನಡೆಯುವ ಸ್ಥಳಗಳಿಗೆ ಪ್ರವೇಶಿಸುವ ಮೊದಲು ವೀಕ್ಷಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಲಾಗುತ್ತದೆ. ಕೋವಿಡ್‌-19 ಸೋಂಕು ಪರೀಕ್ಷೆಯ ನೆಗೆಟಿವ್‌ ವರದಿ ಇದ್ದವರಿಗೆ ಮಾತ್ರ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಸರಕಾರದ ಅಧಿಕೃತ ಪ್ರಯೋಗಾಲಯಗಳಲ್ಲಿ ಕೋವಿಡ್-‌ 19 ಪರೀಕ್ಷೆ ಮಾಡಿಸಬೇಕು ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ