ಆ್ಯಪ್ನಗರ

ಪ್ರೀತಿಸುವಂತೆ ಕಿರುಕುಳ: ಬಾಲಕಿ ಆತ್ಮಹತ್ಯೆ

ತನ್ನನ್ನು ಪ್ರೀತಿಸುವಂತೆ ಯುವಕನೊಬ್ಬ ಒತ್ತಾಯಿಸುತ್ತಿದ್ದರಿಂದ ಮನನೊಂದ ಶಾಲಾ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾತಪಾಳ್ಯ ಪೋಲೀಸ್‌ ಠಾಣಾ ವ್ಯಾಪ್ತಿಯ ರಾಚವಾರಪಲ್ಲಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

Vijaya Karnataka 2 Aug 2018, 4:16 pm
ಚೇಳೂರು: ತನ್ನನ್ನು ಪ್ರೀತಿಸುವಂತೆ ಯುವಕನೊಬ್ಬ ಒತ್ತಾಯಿಸುತ್ತಿದ್ದರಿಂದ ಮನನೊಂದ ಶಾಲಾ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾತಪಾಳ್ಯ ಪೋಲೀಸ್‌ ಠಾಣಾ ವ್ಯಾಪ್ತಿಯ ರಾಚವಾರಪಲ್ಲಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
Vijaya Karnataka Web
ಪ್ರೀತಿಸುವಂತೆ ಕಿರುಕುಳ: ಬಾಲಕಿ ಆತ್ಮಹತ್ಯೆ


ಗ್ರಾಮದ 7ನೇ ತರಗತಿ ವಿದ್ಯಾರ್ಥಿನಿ ರೇಣುಕಾ(13) ಸಾವಿಗೆ ಶರಣಾದ ದುರ್ದೈವಿ. ಈಕೆ ಸೋಮನಾಥಪುರ ಮಮತ ವಿದ್ಯಾನೀಕೇತನ ಅನುದಾನಿತ ಶಾಲೆಯ ವಿದ್ಯಾರ್ಥಿನಿಯಾಗಿದ್ದು ಪ್ರತಿ ದಿನ ತಮ್ಮ ಗ್ರಾಮದಿಂದ ಶಾಲೆಗೆ ನಡೆದುಕೊಂಡು ಹೋಗಿ ಬರುತ್ತಿದ್ದಳು. ದಾರಿ ಮದ್ಯದಲ್ಲಿ ಅದೇ ಗ್ರಾಮದ ಯುವಕ ನಾಗರಾಜ (20) ಎಂಬಾತ ವಿದ್ಯಾರ್ಥಿನಿಗೆ ದಾರಿಯಲ್ಲಿ ಅಡ್ಡಗಟ್ಟಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಪೋಷಕರಿಗೆ ತನಗೆ ಯುವಕನಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಹೇಳಿದರೂ ಆಕೆಯ ಪೋಷಕರು ಈಕೆಗೆ ಬುದ್ದಿವಾದ ಹೇಳಿದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿದ್ದ ಬೆಳೆಗಳಿಗೆ ಹೊಡೆಯುವ ಕ್ರಿಮಿನಾಶಕ ವಿಷ ಸೇವಿಸಿ ಸಾವು ಬದುಕಿನ ನಡುವೆ ಒದ್ದಾಡಿದ್ದಾಳೆ.

ತಕ್ಷಣ ಬಾಲಕಿಯನ್ನ ಚೇಳೂರು ಸರಕಾರಿ ಆಸ್ಪತ್ರೆಗೆ ಕರೆತಂದರೂ ವೈದ್ಯರು ಸಿಗದ ಕಾರಣ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫÜಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪಾತಪಾಳ್ಯ ಠಾಣೆ ಎಸ್ಸೈ ಶ್ರೀನಿವಾಸ, ಬಾಗೇಪಲ್ಲಿ ಸಿಪಿಐ ಗೋವಿಂದರಾಜು ಪರಿಶೀಲನೆ ನಡೆಸಿ ಆರೋಪಿ ನಾಗರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ