ಆ್ಯಪ್ನಗರ

ಬಾಲ್ಯ ವಿವಾಹಕ್ಕೊಳಗಾದ ಬಾಲಕಿ ರಕ್ಷ ಣೆ

ಬಾಗೇಪಲ್ಲಿ ತಾಲೂಕಿನ ಯಗವ ಬಂಡ್ಲಕೆರೆ ಗ್ರಾಮದಲ್ಲಿ ಬಾಲ್ಯವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪುನರ್ವಸತಿ ಕಲ್ಪಿಸಲು ಕ್ರಮಕೈಗೊಂಡಿದ್ದಾರೆ.

Vijaya Karnataka 3 May 2019, 3:15 pm
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಯಗವ ಬಂಡ್ಲಕೆರೆ ಗ್ರಾಮದಲ್ಲಿ ಬಾಲ್ಯವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪುನರ್ವಸತಿ ಕಲ್ಪಿಸಲು ಕ್ರಮಕೈಗೊಂಡಿದ್ದಾರೆ.
Vijaya Karnataka Web
ಬಾಲ್ಯ ವಿವಾಹಕ್ಕೊಳಗಾದ ಬಾಲಕಿ ರಕ್ಷ ಣೆ


ಬಾಲ್ಯ ವಿವಾಹವು ನಡೆದಿದೆ ಎಂಬ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳು, ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಅಪ್ರಾಪ್ತ ಬಾಲಕಿಯ ವಿವಾಹ 32 ವರ್ಷ ದಾಸಪ್ಪನೊಂದಿಗೆ ನಡೆದಿರುವುದನ್ನು ಖಚಿತಪಡಿಸಿಕೊಂಡು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಬಾಗೇಪಲ್ಲಿ ಪೊಲೀಸರಿಗೆ ಏಪ್ರಿಲ್‌ 29ರಂದು ದೂರು ನೀಡಿದ್ದರು.

ಆದರೆ ಘಟನೆ ಬೆಳಕಿಗೆ ಬಂದ ಕೂಡಲೇ ಪೋಷಕರು ನಾಪತ್ತೆಯಾಗಿದ್ದರು. ತನಿಖೆ ಕೈಗೊಂಡ ಪೊಲೀಸರು ಮೇ 2ರಂದು ಬಾಲಕಿಯನ್ನು ಪತ್ತೆ ಹೆಚ್ಚಿದ್ದು, ವೈದ್ಯಕೀಯ ತಪಾಸಣೆಗೊಳಪಡಿಸಿದ ನಂತರ ಬಾಲಕಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಚಿಕ್ಕಬಳ್ಳಾಪುರದ ಬಾಲಕಿಯ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಾರ್ವಜನಿಕರಲ್ಲಿ ಮನವಿ
ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಬಾಲ್ಯ ವಿವಾಹ ಯತ್ನ ಕಂಡುಬಂದಲ್ಲಿ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಡಾ.ಜಯಮಾಲ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ