ಆ್ಯಪ್ನಗರ

ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಹೆ 7ರಲ್ಲಿ ನಡೆದಿದೆ.

Vijaya Karnataka 11 May 2019, 5:00 am
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಹೆ 7ರಲ್ಲಿ ನಡೆದಿದೆ.
Vijaya Karnataka Web
ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು


ನಗರದ ಎಂಜಿ ರಸ್ತೆಯಲ್ಲಿರುವ ಎಂ.ಜೆ. ಬೇಕರಿ ಮಾಲೀಕ ಪುನೀತ್‌(25), ಎಸ್‌ಜೆಸಿಐಟಿ ಕಾಲೇಜಿನ ಗುಲ್ಬರ್ಗಾ ಮೂಲದ ವಿದ್ಯಾರ್ಥಿ ಹನುಮೇಶ್‌(22)ಮೃತ ದುದೈವಿಗಳು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಯಶ್ವಂತ್‌ ಮತ್ತು ನಂದೀಶ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಶುಕ್ರವಾರ ನಂದೀಶ್‌ ಹುಟ್ಟು ಹಬ್ಬಕ್ಕಾಗಿ ನಂದಿಕ್ರಾಸ್‌ಗೆ ತೆರಳಿ ಸ್ನೇಹಿತರೆಲ್ಲರೂ ಸೇರಿ ಹುಟ್ಟು ಹಬ್ಬದ ಆಚರಿಸಿಕೊಂಡು ಚಿಕ್ಕಬಳ್ಳಾಪುರಕ್ಕೆ ವಾಪಸ್‌ ಆಗುವಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ