ಆ್ಯಪ್ನಗರ

ಭಯೋತ್ಪಾದನೆ ನಿಗ್ರಹಕ್ಕೆ ಕೈಜೋಡಿಸಿ

ದೇಶವನ್ನು ಪೀಡಿಸುತ್ತಿರುವ ಹಲವು ಪಿಡುಗುಗಳಲ್ಲಿ ಭಯೋತ್ಪಾದನೆ ಅತ್ಯಂತ ದೊಡ್ಡ ಪಿಡುಗಾಗಿದೆ. ಆ ಪಿಡುಗನ್ನು ಹತ್ತಿಕ್ಕುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಸರಕಾರಿ ಮಹಿಳಾ ಕಾಲೆಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್‌ ತಿಳಿಸಿದರು.

Vijaya Karnataka 23 May 2019, 2:34 pm
ಸರಕಾರಿ ಮಹಿಳಾ ಕಾಲೇಜಿನಲ್ಲಿ 'ಭಯೋತ್ಪಾದನಾ ವಿರೋಧಿ ದಿನಾಚರಣೆ'
Vijaya Karnataka Web
ಭಯೋತ್ಪಾದನೆ ನಿಗ್ರಹಕ್ಕೆ ಕೈಜೋಡಿಸಿ

ಚಿಂತಾಮಣಿ:
ದೇಶವನ್ನು ಪೀಡಿಸುತ್ತಿರುವ ಹಲವು ಪಿಡುಗುಗಳಲ್ಲಿ ಭಯೋತ್ಪಾದನೆ ಅತ್ಯಂತ ದೊಡ್ಡ ಪಿಡುಗಾಗಿದೆ. ಆ ಪಿಡುಗನ್ನು ಹತ್ತಿಕ್ಕುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಸರಕಾರಿ ಮಹಿಳಾ ಕಾಲೆಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್‌ ತಿಳಿಸಿದರು.

ನಗರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಕಾಲೇಜು ಶಿಕ್ಷ ಣ ಇಲಾಖೆ ಮತ್ತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಮಾರ್ಗಸೂಚಿಯಂತೆ ಹಮ್ಮಿಕೊಳ್ಳಲಾಗಿದ್ದ 'ಭಯೋತ್ಪಾದನಾ ವಿರೋಧಿ ದಿನಾಚರಣೆ'ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವ ಸಮುದಾಯವು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕು. ವಿದ್ಯಾವಂತ ಯುವ ಸಮುದಾಯವನ್ನು ವಿವಿಧ ಆಸೆ ಮತ್ತು ಆಮಿಶಗಳನ್ನು ನೀಡಿ ತಮ್ಮ ಕಡೆಗೆ ಸೆಳೆಯುತ್ತಾರೆ. ಇಂತಹ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ತಮ್ಮ ಸುತ್ತಲಿನ ಪ್ರದೇಶದಲ್ಲಿ ಇಂತಹ ಅನುಮಾನದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ತಿಳಿಸಿದರು.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ದೇಶದ್ರೋಹ ಬಿಂಬಿಸುವ ವಿಚಾರಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬರುತ್ತಿದೆ. ಹೀಗೆ ಮಾಡುವವರ ಭವಿಷ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ. ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗುವಂಥ ಯಾವುದೇ ಹೇಳಿಕೆಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸದೇ ದೇಶಪ್ರೇಮ ಮೆರೆಯಬೇಕು ಎಂದು ವಿದ್ಯಾರ್ಥಿಗಳು ತಿಳಿಸಿದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್‌.ರಘು ವಿದ್ಯಾರ್ಥಿಗಳಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿ ಭೋದಿಸಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದಲ್ಲಿ ಹಲವು ಜಾತಿ, ಧರ್ಮಗಳು ಮತ್ತು ಸಂಸ್ಕೃತಿಗಳಿವೆ. ಇಂತಹ ಸನ್ನಿವೇಶದಲ್ಲಿ ಹಿಂಸೆ ಮತ್ತು ಭಯವನ್ನುಂಟು ಮಾಡುವ ಕೃತ್ಯಗಳಿಗೆ ನಮ್ಮಲ್ಲಿನ ಭಿನ್ನತೆಯನ್ನು ದುಷ್ಟರು ಬಳಸಿಕೊಳ್ಳುವ ಅವಕಾಶವಿರುತ್ತದೆ. ಆದ್ದರಿಂದ ವಿದ್ಯಾರ್ಥಿ ದೆಸೆಯಿಂದಲೇ ನಾವೆಲ್ಲರೂ ಒಂದೇ ಎನ್ನುವ ಭಾವನೆ ತಾಳಬೇಕು. ಮತ್ತು ಎಲ್ಲಾ ಸಂಸ್ಕೃತಿಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಸಾತ್ಮಕ, ಭಯೋತ್ಪಾದಕ ಚಟುವಟಿಕೆಗಳನ್ನು ವಿರೋಧಿಸಬೇಕು ಎಂತು ಕಿವಿಮಾತು ಹೇಳಿದರು.

ಸಮಾಜಶಾಸ್ತ್ರ ಪ್ರಾಧ್ಯಾಪಕಿ ವಿ.ಅಂಜುಳಾ ಮಾತನಾಡಿ, ವಿವಿಧ ಉದ್ದೇಶಗಳ ಈಡೇರಿಕೆಗಾಗಿ ಕೆಲ ಗುಂಪುಗಳು ಅಥವಾ ಸಂಘಟನೆಗಳು ಹಿಂಸಾತ್ಮಕ ಕೃತ್ಯಗಳನ್ನು ನಡೆಸುತ್ತಾರೆ. ಅವರ ಮನಸ್ಸನ್ನು ಪರಿವರ್ತನೆ ಮಾಡಿ, ಇಂಥ ಭೀಕರ ಕೃತ್ಯಗಳನ್ನು ನಡೆಸಲು ಪ್ರೇರಣೆ ಮಾಡುತ್ತಾರೆ. ಆದರೆ ನಮ್ಮ ದೇಶ ಮತ್ತು ನಮ್ಮ ಜನರ ಬಗ್ಗೆ ಅಭಿಮಾನ ಮತ್ತು ಗೌರವ ಬೆಳೆಸಿಕೊಂಡರೆ ಯಾವುದೇ ಸಂದರ್ಭದಲ್ಲಿ ನಮ್ಮನ್ನು ಯಾವುದೇ ಭಯೋತ್ಪಾದಕರು ಸೆಳೆಯಲು ಸಾಧ್ಯವಿಲ್ಲವೆಂದರು.

ಪ್ರಾಧ್ಯಾಪಕರಾದ ಡಾ.ಬಿ.ಎಸ್‌.ಕೃಷ್ಣೇಗೌಡ, ಪ್ರೊ.ಎಸ್‌.ಟಿ.ನವೀನ್‌ ಕುಮಾರ್‌, ಪ್ರೊ.ವಿ.ಕೆ.ರಾಯಪ್ಪ, ಪ್ರೊ.ತರನಂ ನಿಖತ್‌, ಪ್ರೊ.ಮುತಾಹರ್‌ ಉನ್ನಿಸಾ, ಡಾ.ಜಿ.ತಿಮ್ಮಾರೆಡ್ಡಿ, ಪ್ರೊ.ವಿ.ಅಂಜುಳ, ಅಶ್ವತ್ಥರೆಡ್ಡಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ