ಆ್ಯಪ್ನಗರ

ಮಕ್ಕಳ ಚಲನಚಿತ್ರೋತ್ಸವಕ್ಕೆ ಚಾಲನೆ

ಸದಾ ಪೋಷಕರು, ಶಿಕ್ಷ ಕರು ಹಾಗೂ ಪಠ್ಯಕ್ರಮದ ಒತ್ತಡದಲ್ಲಿರುವ ಮಕ್ಕಳಿಗೆ ಮನರಂಜನೆ ಕೂಡ ತುಂಬಾ ಅಗತ್ಯವಾಗಿದೆ. ಸದಭಿರುಚಿಯ ಸಿನಿಮಾ ವೀಕ್ಷ ಣೆಯಿಂದ ಮಕ್ಕಳಿಗೆ ಮನರಂಜನೆಯ ಜತೆಗೆ ಒತ್ತಡ ಕಡಿಮೆಯಾಗುತ್ತದೆ. ಜತೆಗೆ ಮನೋವಿಕಾಸವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಅಭಿಪ್ರಾಯಪಟ್ಟರು.

Vijaya Karnataka 13 Jul 2019, 5:00 am
ಚಿಕ್ಕಬಳ್ಳಾಪುರ:
ಸದಾ ಪೋಷಕರು, ಶಿಕ್ಷ ಕರು ಹಾಗೂ ಪಠ್ಯಕ್ರಮದ ಒತ್ತಡದಲ್ಲಿರುವ ಮಕ್ಕಳಿಗೆ ಮನರಂಜನೆ ಕೂಡ ತುಂಬಾ ಅಗತ್ಯವಾಗಿದೆ. ಸದಭಿರುಚಿಯ ಸಿನಿಮಾ ವೀಕ್ಷ ಣೆಯಿಂದ ಮಕ್ಕಳಿಗೆ ಮನರಂಜನೆಯ ಜತೆಗೆ ಒತ್ತಡ ಕಡಿಮೆಯಾಗುತ್ತದೆ. ಜತೆಗೆ ಮನೋವಿಕಾಸವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಅಭಿಪ್ರಾಯಪಟ್ಟರು.
Vijaya Karnataka Web
ಮಕ್ಕಳ ಚಲನಚಿತ್ರೋತ್ಸವಕ್ಕೆ ಚಾಲನೆ


ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷ ಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಮಕ್ಕಳ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಆರು ತಾಲ್ಲೂಕಿನ 13 ಚಲನಚಿತ್ರಮಂದಿರಗಳಲ್ಲಿ ಜುಲೈ 12ರಿಂದ 1ರವರೆಗೆ (ಭಾನುವಾರ ಹೊರತುಪಡಿಸಿ) ಬೆಳಗ್ಗೆ 8ರಿಂದ 10ರವರೆಗೆ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಒಬ್ಬ ವಿದ್ಯಾರ್ಥಿಗೆ 15 ರೂ. ಶುಲ್ಕ ನಿಗದಿಪಡಿಸಲಾಗಿದೆ. ನಿತ್ಯ 8255 ಶಾಲಾ ಮಕ್ಕಳು ವಿವಿಧ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸುತ್ತಾರೆ ಎಂದು ತಿಳಿಸಿದರು.

ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ನೀತಿ ಪ್ರಧಾನವಾಗಿರುವ ಚಲನಚಿತ್ರಗಳು ಮಕ್ಕಳ ಮೇಲೆ ಪ್ರಭಾವ ಬೀರುತ್ತವೆ. ಹೀಗಾಗಿ ಚಲನಚಿತ್ರಗಳಲ್ಲಿರುವ ಉತ್ತಮ ಅಂಶಗಳನ್ನಷ್ಟೇ ವಿದ್ಯಾರ್ಥಿಗಳು ಸ್ವೀಕರಿಸಬೇಕು. ಶೈಕ್ಷ ಣಿಕ ಗುಣಮಟ್ಟ ಹೆಚ್ಚಿಸಲು ಸರಕಾರ ಕೈಗೊಂಡಿರುವ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ತಹಸೀಲ್ದಾರ್‌ ಕೆ.ನರಸಿಂಹಮೂರ್ತಿ ಮಾತನಾಡಿ ಮಕ್ಕಳ ಮನಸ್ಸಿನಲ್ಲಿ ಉಂಟಾಗುವ ಒತ್ತಡವನ್ನು ದೂರ ಮಾಡಿ ಸರಿದಾರಿಯಲ್ಲಿ ನಡೆಯುವಂತೆ ತಿದ್ದುವ ಕೆಲಸವನ್ನು ಸಿನಿಮಾ ಮಾಡುತ್ತವೆ. ಮಕ್ಕಳು ಚಿತ್ರದಲ್ಲಿರುವ ಉತ್ತಮ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷ ಣಾಧಿಕಾರಿ ಶಾಂತಲಾ, ಮಕ್ಕಳ ಚಿತ್ರ ಸಂಸ್ಥೆಯ ವ್ಯವಸ್ಥಾಪಕ ಎಸ್‌.ರಮೇಶ್‌, ಬಾಲಾಜಿ ಚಿತ್ರಮಂದಿರದ ವ್ಯವಸ್ಥಾಪಕ ವೇಣು ಮುಂತಾದವರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಮಕ್ಕಳ ಚಲನ ಚಿತ್ರೋತ್ಸವಕ್ಕೆ ಶುಕ್ರವಾರ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಚಾಲನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ