ಆ್ಯಪ್ನಗರ

ಧೂಮಪಾನ ಅಪರಾಧ, ಎಚ್ಚರಿಕೆ ಫಲಕ ಹಾಕಲು ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಈ ಕುರಿತು ಸರರ್ಕಾರ ಹೊರಡಿಸಿರುವ ಅಧಿಕೃತ ಸೂಚನೆಯನ್ನು ಶಾಲಾ ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ, ದೇವಾಲಯದ ಸಮೀಪದಲ್ಲಿ ಹಾಗೂ ತಂಬಾಕು ಮಾರಾಟ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ತಿಳಿಸಿದರು.

Vijaya Karnataka 26 Jul 2019, 5:00 am
ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಪರಿಶೀಲನೆ ಸಭೆ | ಎಡಿಸಿ ಆರತಿ ಆನಂದ್‌ ಸೂಚನೆ
Vijaya Karnataka Web
ಧೂಮಪಾನ ಅಪರಾಧ, ಎಚ್ಚರಿಕೆ ಫಲಕ ಹಾಕಲು ಸೂಚನೆ


ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ


ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಈ ಕುರಿತು ಸರರ್ಕಾರ ಹೊರಡಿಸಿರುವ ಅಧಿಕೃತ ಸೂಚನೆಯನ್ನು ಶಾಲಾ ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ, ದೇವಾಲಯದ ಸಮೀಪದಲ್ಲಿ ಹಾಗೂ ತಂಬಾಕು ಮಾರಾಟ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ (ಕೊಟ್ಪಾ) ತ್ರೈಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗಾಗಿ, ತಂಬಾಕು ಉತ್ಪನ್ನಗಳ ಉದ್ದಿಮೆದಾರರು, ಮಾರಾಟಗಾರರು, ವ್ಯಾಪಾರಸ್ಥರು, ಸಾರ್ವಜನಿಕರು ಕಡ್ಡಾಯವಾಗಿ ಕೋಟ್ಪಾ ಕಾಯಿದೆಯ ಕಾನೂನುಗಳನ್ನು ಪಾಲಿಸಬೇಕಾಗಿದೆ ಎಂದು ಹೇಳಿದರು.

ಸೆಕ್ಷ ನ್‌ 4ರ ಅಡಿಯಲ್ಲಿ ಸಾರ್ವಜನಿಕರು ಸೇರುವ, ಓಡಾಡುವ ಸ್ಥಳಗಳಲ್ಲಿ ಯಾರೂ ಧೂಮಪಾನ ಮಾಡದಂತೆ ಹಾಗೂ ಸಾರ್ಜನಿಕ ಸ್ಥಳದ ಮಾಲೀಕರು, ವ್ಯವಸ್ಥಾಪಕರ, ಮುಖ್ಯಸ್ಥರು ಇತರೆ ಜವಾಬ್ದಾರಿಯುತರು ಕನಿಷ್ಠ 60*45 ಸೆಂ.ಮೀ ನಾಮಫಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚನೆ ನೀಡಬೇಕು. ನಿರ್ಲಕ್ಷಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ವಿವಿಧ ರೀತಿ ದುಷ್ಟರಿಣಾಮ ಬೀರುತ್ತಿದೆ. ತಂಬಾಕು ಉತ್ಪನ್ನಗಳಲ್ಲಿ ಸುಮಾರು 60ಕ್ಕಿಂತ ಹೆಚ್ಚು ಕ್ಯಾನ್ಸರ್‌ ಉಂಟುಮಾಡುವಂತಹ ರಾಸಾಯನಿಕಗಳು ಕ್ಯಾನ್ಸರ್‌ ಕಾಯಿಲೆಯನ್ನು ಉಂಟು ಮಾಡುತ್ತವೆ. ಈ ತಂಬಾಕು ಉತ್ಪನ್ನಗಳ ಸೇವನೆಯಿಂದ ಬಾಯಿ ಕ್ಯಾನ್ಸರ್‌ ಧ್ವನಿಪೆಟ್ಟಿಗೆ ಕ್ಯಾನ್ಸರ್‌, ಅನ್ನನಾಳದ ಕ್ಯಾನ್ಸರ್‌, ಶ್ವಾಸಕೋಶದ ಕ್ಯಾನ್ಸರ್‌ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಅನೇಕ ಮಂದಿ ತೊಂದರೆಗೊಳಗಾಗಿದ್ದಾರೆ. ಹಾಗಾಗಿ, ಇದನ್ನು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ.ಕೆ.ಬಾಬುರೆಡ್ಡಿ ಮಾತನಾಡಿ, ತಂಬಾಕು ಉತ್ಪನ್ನಗಳ ಪ್ಯಾಕ್‌ ಮೇಲೆ ಆರೋಗ್ಯ ಎಚ್ಚರಿಕೆ ಚಿತ್ರ ಇಲ್ಲದ ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಯಾವುದೇ ತಂಬಾಕು ಉತ್ಪನ್ನಗಳ ನೇರ, ಪರೋಕ್ಷ ಜಾಹೀರಾತು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ ಕಾಲೇಜು ಆವರಣದ ತಂಬಾಕು ಮಾರಾಟ ಕಂಡುಬಂದರೆ ಅಂತಹವರ ವಿರುದ್ಧ ದಂಡ ವಿಧಿಸಿ ತಂಬಾಕು ಮಾರಾಟ ಮಾಡದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ ಎಂದರು.

ಈ ಕುರಿತು ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಜೂನ್‌ ಅಂತ್ಯದವರೆಗೆ ಸೆಕ್ಷ ನ್‌ 4ರ ಅಡಿಯಲ್ಲಿ ಒಟ್ಟು 554 ಪ್ರಕರಣಗಳನ್ನು ದಾಖಲಿಸಿದ್ದು, 33,165 ದಂಡ ವಸೂಲಿ ಮಾಡಲಾಗಿದೆ. ಸೆಕ್ಷ ನ್‌ 6ರಡಿಯಲ್ಲಿ 70 ಪ್ರಕರಣಗಳನ್ನು ದಾಖಲಿಸಿದ್ದು, 4220 ದಂಡ, ಸೆಕ್ಷ ನ್‌ 6ಬಿ ಅಡಿಯಲ್ಲಿ 19 ಪ್ರಕರಣ ದಾಖಲಿಸಲಾಗಿದೆ. 1600 ದಂಡ ವಸೂಲಿ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಸೆಕ್ಷ ನ್‌-7, 8 ಮತ್ತು 9ರ ಪ್ರಕಾರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬಿಡಿ ಬಿಡಿಯಾಗಿ ಮಾರಾಟ ಮಾಡುತ್ತಿರುವ ಸಿಗರೇಟು, ಬೀಡಿ ಹಾಗೂ ಕಡ್ಡಿಪುಡಿ ಮತ್ತು ಇತರೆ ಜಗಿಯುವ ತಂಬಾಕು ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕೊಟ್ಪಾ ಕಾಯ್ದೆ ಕಲಂ 20ರ ಅಡಿಯಲ್ಲಿ ದಂಡನೆಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕುಷ್ಟರೋಗ ನಿಯಂತ್ರಣಾಧಿಕಾರಿ ಚಂದ್ರಮೋಹನ್‌, ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ