ಆ್ಯಪ್ನಗರ

ಚಿಂತಾಮಣಿ ಬಸ್‌ ನಿಲ್ದಾಣದಲ್ಲಿ ಬಾಂಬ್‌ಗಾಗಿ ಶೋಧ

ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ದಳ ಹಾಗೂ ಶ್ವಾನದಳಗಳು ಶೋಧ ಕಾರ್ಯಾಚರಣೆ ನಡೆಸಿದವು.

Vijaya Karnataka 22 Aug 2019, 3:40 pm
ವಿಕ ಸುದ್ದಿಲೋಕ ಚಿಂತಾಮಣಿ ನಗರ
Vijaya Karnataka Web
ಚಿಂತಾಮಣಿ ಬಸ್‌ ನಿಲ್ದಾಣದಲ್ಲಿ ಬಾಂಬ್‌ಗಾಗಿ ಶೋಧ


ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ದಳ ಹಾಗೂ ಶ್ವಾನದಳಗಳು ಶೋಧ ಕಾರ್ಯಾಚರಣೆ ನಡೆಸಿದವು.

ಉಗ್ರದಾಳಿ ಸಾಧ್ಯತೆಯ ಎಚ್ಚರಿಕೆಯನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಮುಂಜಾಗೃತೆ ಕ್ರಮವಾಗಿ ನಗರದ ಸರಕಾರಿ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ, ದ್ವಿಚಕ್ರ ವಾಹನಗಳ ಪಾರ್ಕಿಂಗ್‌ನÜಲ್ಲಿ ಬಾಂಬ್‌ ಪತ್ತೆ ದಳ ಹಾಗೂ ಶ್ವಾನದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು.

ಕೆಲಕಾಲ ಆತಂಕ: ಬಾಂಬ್‌ ಪತ್ತೆ ದಳ ಹಾಗೂ ಶ್ವಾನ ದಳ ಸಿಬ್ಬಂದಿಯ ದಿಢೀರ್‌ ಕಾರ್ಯಾಚರಣೆಯಿಂದ ಬಸ್‌ ನಿಲ್ದಾಣದಲ್ಲಿ ಕೆಲಕಾಲ ಸಾರ್ವಜನಿಕರು ಆತಂಕಗೊಳಗಾಗದರು.

ಚಿಂತಾಮಣಿಯಲ್ಲಿ ಈ ಹಿಂದೆಯೂ ಕೆಲ ಉಗ್ರರನ್ನು ಬಂಧಿಸಿ ಅವರ ಬಳಿ ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗದ ನಿಯಂತ್ರಣಾಧಿಕಾರಿ ಬಸವರಾಜ್‌ ಸಹಕಾರದಲ್ಲಿ ಜಿಲ್ಲಾ ಬಾಂಬ್‌ ಪತ್ತೆ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಹತ್ತುಕ್ಕೂ ಹೆಚ್ಚು ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ತಪಾಸಣೆ ನಡೆಸಿದರು.

ಈ ವೇಳೆ ಮಾತನಾಡಿದ ಕೆಎಸ್‌ಆರ್‌ಟಿಸಿ ಜಿಲ್ಲಾ ನಿಯಂತ್ರಣಾಧಿಕಾರಿ ಬಸವರಾಜ್‌, ರಾಜ್ಯದಲ್ಲಿ ಶಾಂತಿ ಕದಡಲು ಉಗ್ರರು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಆಲರ್ಟ್‌ ಘೋಷಣೆ ಮಾಡಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಆದೇಶದ ಮೆರೆಗೆ ಜನನಿಬಿಡ ಸ್ಥಳಗಳು, ರೈಲ್ವೆ ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಲ್ಲಿ ಯಾವುದೇ ರೀತಿಯ ಆಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತೆ ಕ್ರಮವಾಗಿ ಬಸ್‌ ನಿಲ್ದಾಣ ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಶೊಧ ಕಾರ್ಯ ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಾಂಬ್‌ ಪತ್ತೆದಳ ಎ.ಎಸ್‌.ಐ ಮಂಜುನಾಥ್‌ ಹಾಗೂ ಶ್ವಾನದಳದ ಅಧಿಕಾರಿಗಳು, ಸ್ಥಳಿಯ ಪೊಲೀಸರು ಮತಿತ್ತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ