ಆ್ಯಪ್ನಗರ

ದ್ವಿಚಕ್ರವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ, ನಾಲ್ವರಿಗೆ ಗಾಯ

ದ್ವಿಚಕ್ರವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ದನಮಿಟ್ಟೇನಹಳ್ಳಿ ಬಳಿ ನಡೆದಿದೆ.

Vijaya Karnataka 10 Feb 2019, 5:00 am
ಚಿಂತಾಮಣಿ ಗ್ರಾಮಾಂತರ: ದ್ವಿಚಕ್ರವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ದನಮಿಟ್ಟೇನಹಳ್ಳಿ ಬಳಿ ನಡೆದಿದೆ.
Vijaya Karnataka Web accident four injured
ದ್ವಿಚಕ್ರವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ, ನಾಲ್ವರಿಗೆ ಗಾಯ


ತಾಲೂಕಿನ ಮಸಲಹಳ್ಳಿಯ ನಾರೇಪ್ಪ ಮತ್ತು ರಾಮಕ್ಕ ಹಾಗೂ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಸಮೀಪದ ಮಾಸಪಲ್ಲಿ ಗ್ರಾಮದ ಶ್ರೀನಿವಾಸ ಮತ್ತು ಮುನಿರಾಜ್‌ ಗಾಯಗೊಂಡವರು.

ಚಿಂತಾಮಣಿ ನಗರದ ತಾಲೂಕು ಕಚೇರಿಯಲ್ಲಿ ಪಡಿತರ ಚೀಟಿ ಮಾಡಿಸಲು ಬಂದಿದ್ದ ಮಸಲಹಳ್ಳಿಯ ನಾರೇಪ್ಪ ಮತ್ತು ಅತನ ಸೊಸೆ ರಾಮಕ್ಕ ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಬಾಗೇಪಲ್ಲಿ-ಚಿಂತಾಮಣಿ ಮಾರ್ಗದ ದನಮಿಟ್ಟೆನಹಳ್ಳಿ ಬಳಿ ತಿರುವು ತೆಗೆದುಕೊಳ್ಳುವಾಗ ಬಾಗೇಪಲ್ಲಿ ಕಡೆಯಿಂದ ಬಂದ ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಎರಡೂ ದ್ವಿಚಕ್ರವಾಹನಗಳು ಜಖಂಗೊಂಡಿವೆ. ನಾರೇಪ್ಪ, ರಾಮಕ್ಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಮತ್ತು ಮುನಿರಾಜು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿಂತಾಮಣಿ ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ