ಆ್ಯಪ್ನಗರ

ಕೋಟಗಲ್‌ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ

ಸಾದಲಿ ಹೋಬಳಿಯ ಕೋಟಗಲ್‌ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿರುವ ಜಿಲ್ಲಾಡಳಿತದ ವಿರುದ್ಧ ಕೋಟಗಲ್‌ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 12 Jun 2019, 5:00 am
ಶಿಡ್ಲಘಟ್ಟ : ಸಾದಲಿ ಹೋಬಳಿಯ ಕೋಟಗಲ್‌ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿರುವ ಜಿಲ್ಲಾಡಳಿತದ ವಿರುದ್ಧ ಕೋಟಗಲ್‌ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web again permission for mining at kotagal hill
ಕೋಟಗಲ್‌ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ


ದಿಬ್ಬೂರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕೋಟಗಲ್‌ ಗ್ರಾಮಕ್ಕೆ ಅಂಟಿಕೊಂಡಿರುವ ಬೆಟ್ಟದಲ್ಲಿ ಈಗಾಗಲೇ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಅದು ಸಾಲದೆಂಬಂತೆ ಇದೀಗ ಮತ್ತೆ ಅಲ್ಲಿನ ಸರ್ವೆ ನಂಬರ್‌ 72 ಹಾಗೂ39ರಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಇಲ್ಲಿ ಗಣಿಗಾರಿಕೆ ಬೇಡ ಎಂದರೂ ಮತ್ತೆ ಮತ್ತೆ ಹೊಸದಾಗಿ ಅನುಮತಿ ನೀಡುವ ಮೂಲಕ ಜಿಲ್ಲಾಡಳಿತವು ನಮ್ಮ ಜೀವನದ ಜತೆಗೆ ಚೆಲ್ಲಾಟವಾಡುತ್ತಿದೆ ಎಂದು ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ದೂರಿದರು.

ಬೆಟ್ಟದ ಬಳಿ ಜಮಾಯಿಸಿದ ಕೋಟಗಲ್‌ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ಮಂದಿ, ಈಗಾಗಲೇ ನಡೆಯುತ್ತಿರುವ ಗಣಿಗಾರಿಕೆಯಿಂದ ಇಲ್ಲಿ ನಮಗೆ ಅನೇಕ ಸಮಸ್ಯೆಗಳು ಎದುರಾಗಿವೆ. ಬೆಟ್ಟದ ಸುತ್ತಮುತ್ತ ಹಾಗೂ ಬೆಟ್ಟದಿಂದ ಕಲ್ಲುಗಳನ್ನು ಹೊತ್ತೊಯ್ಯುವ ಲಾರಿಗಳು ಸಾಗುವ ಮಾರ್ಗದ ಉದ್ದಕ್ಕೂ ಹೊಲ, ಗದ್ದೆಗಳಲ್ಲಿನ ಬೆಳೆಗಳು ಹಾಳಾಗಿವೆ. ಕಲ್ಲು ಪುಡಿ ಹಾಗೂ ಟಿಪ್ಪರ್‌ ಲಾರಿಗಳು ಸಾಗುವ ರಸ್ತೆಯ ಧೂಳು ಅಕ್ಕ ಪಕ್ಕದಲ್ಲಿನ ತೋಟಗಳ ಹಿಪ್ಪುನೇರಳೆ, ತರಕಾರಿ, ಹೂವು, ಹಣ್ಣು, ದನಕರುಗಳ ಮೇವಿನ ಮೇಲೆ ಕೂತು ಸಮಸ್ಯೆ ಹೆಚ್ಚಿಸುತ್ತಿವೆ. ಜತೆಗೆ ಗಣಿಗಾರಿಕೆಯಲ್ಲಿ ಸ್ಫೋಟಕ್ಕೆ ಬಳಸುವ ಸಿಡಿ ಮದ್ದುಗಳಿಂದ ಬೆಟ್ಟದ ಅಕ್ಕಪಕ್ಕದಲ್ಲಿನ ಮನೆಗಳ ಗೋಡೆಗಳು ಬಿರುಕು ಬಿಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ ಸಣ್ಣ ಪ್ರಮಾಣದಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದೀಗ ಮತ್ತೆ ಎರಡು ಪರವಾನಗಿಯನ್ನು ನೀಡಿದ್ದು, ಇದರಿಂದ ಜಲ್ಲಿ ಕ್ರಶರ್‌ಗಳೇನಾದರು ಕಾರ್ಯ ನಿರ್ವಹಿಸುತ್ತವೆಯೇ ಎನ್ನುವ ಆತಂಕ ಕೋಟಗಲ್‌ನ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮೂಡಿದೆ.

ಮುಂಜಾಗ್ರತಾ ಕ್ರಮಕ್ಕೆ ಆಗ್ರಹ: ಈಗಾಗಲೇ ಅನುಮತಿ ಕೊಟ್ಟ ಗಣಿಗಾರಿಕೆಯಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಪ್ರಕೃತಿಗೆ ತೊಂದರೆ ಆಗದಂತೆ ಸೂಕ್ತವಾದ ಮುಂಜಾಗ್ರತೆಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾ ಕೇಂದ್ರದಲ್ಲಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪ್ರಾಣಿಗಳ ಜೀವಕ್ಕೂ ಸಂಚಕಾರ
ಜಲ್ಲಿ ಕ್ರಷರ್‌ಗಳಿಂದ ಜನರಿಗಷ್ಟೇ ಅಲ್ಲ, ಕೋಟಗಲ್‌ ಬೆಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿರುವ ಜಿಂಕೆ, ನವಿಲು, ಮೊಲ ಇನ್ನಿತರ ಪ್ರಾಣಿಗಳ ಜೀವಕ್ಕೂ ಸಂಚಕಾರ ತರಲಿದೆ. ಹಾಗಾಗಿ ಹೊಸದಾಗಿ ಗಣಿಗಾರಿಕೆ ನಡೆಸಲು ಅನುಮತಿ ನೀಡಬಾರದು ಎಂಬುದು ಸ್ಥಳೀಯ ಒತ್ತಾಯ.

11ಎಸ್‌ಡಿಎಲ್‌1:

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ