ಆ್ಯಪ್ನಗರ

ಟಿಪ್ಪು ಜಯಂತಿ ಆಚರಣೆ ಮಾಡುವವರು ಬಿಜೆಪಿಯವರಲ್ಲ: ಅಶ್ವತ್ಥನಾರಾಯಣ

ಟಿಪ್ಪು ಜಯಂತಿ ಈಗ ಭಾರಿ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿತ್ತು. ಈಗ ಅದನ್ನು ಮುಂದುವರಿಸದಿರಲು ಬಿಜೆಪಿ ಸರಕಾರ ನಿರ್ಧರಿಸಿದೆ.

Vijaya Karnataka Web 28 Oct 2019, 4:19 pm
ಚಿಕ್ಕಬಳ್ಳಾಪುರ: ಟಿಪ್ಪು ಜಯಂತಿ ಆಚರಣೆಯನ್ನು ನಾವು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಆಚರಿಸಿಕೊಳ್ಳುವವರು ಆಚರಿಸಿಕೊಳ್ಳಲಿ. ಯಾರು ಆಚರಣೆ ಮಾಡುತ್ತಾರೋ ಅವರು ಬಿಜೆಪಿಯವರಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
Vijaya Karnataka Web ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ


ಚಿಕ್ಕಬಳ್ಳಾಪುರದಲ್ಲಿ ಡಾ. ಅಶ್ವತ್ಥನಾರಾಯಣ ಸುದ್ದಿಗಾರರೊಂದಿಗೆ ಮಾತನಾಡಿದರು.

ಟಿಪ್ಪು ಜಯಂತಿಯನ್ನು ನಾವು ಆಚರಿಸುತ್ತೇವೆ ಎಂದು ಯುವ ಮುಖಂಡ ಶರತ್‌ ಬಚ್ಚೇಗೌಡ ನೀಡಿದ ಹೇಳಿಕೆಗೆ ಅಶ್ವತ್ಥನಾರಾಯಣ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದರು.

ಟಿಪ್ಪು ಜಯಂತಿಯನ್ನು ಆಚರಣೆ ಮಾಡುವವರು ಬಿಜೆಪಿಯವರಲ್ಲ ಎಂದು ಕಿಡಿಕಾರಿದರು.

ಡಿಕೆ ಶಿವಕುಮಾರ್ ಬಿಡುಗಡೆಯಿಂದ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳನ್ನು ಜತೆಗಿಟ್ಟುಕೊಂಡಿದೆ‌. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ದೇಶದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದೆ. ಆ ಪಕ್ಷಕ್ಕೆ ಭವಿಷ್ಯ ಇಲ್ಲ. ಅದಕ್ಕೆ ಸರಿಯಾದ ನಾಯಕರಿಲ್ಲ. ಜನಪ್ರಿಯ ಕಾರ್ಯಕ್ರಮಗಳು ಒಂದೂ ಇಲ್ಲ. ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದ್ದು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ