ಆ್ಯಪ್ನಗರ

ನಿಧಾನವಾಗಿ ಬಿಜೆಪಿ ತೆಕ್ಕೆಗೆ ಜಾರುತ್ತಿದೆ ಕಾಂಗ್ರೆಸ್‌ನ ಭದ್ರಕೋಟೆ ಚಿಕ್ಕಬಳ್ಳಾಪುರ..!

ಸುಧಾಕರ್‌ ಅವರು ಹಂತ ಹಂತವಾಗಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ನಗರಸಭೆಗಳಲ್ಲಿ ತಮ್ಮದೇ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷರನ್ನಾಗಿ ಮಾಡಿ ಹಿಡಿತಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಮತ್ತು ನಗರಸಭೆ ಅಧ್ಯಕ್ಷ ಆನಂದಬಾಬು ರೆಡ್ಡಿ ಕೂಡಾ ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ.

Vijaya Karnataka Web 16 Jan 2021, 6:42 am
ಚಿಕ್ಕಬಳ್ಳಾಪುರ: ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಹೆಸರಾದ ಚಿಕ್ಕಬಳ್ಳಾಪುರ ನಿಧಾನವಾಗಿ ಬಿಜೆಪಿ ತೆಕ್ಕೆಗೆ ಜಾರುತ್ತಿರುವುದು ಕಂಡುಬಂದಿದೆ.
Vijaya Karnataka Web BJP FLAG.
Image used for representational purpose


ಡಾ.ಕೆ ಸುಧಾಕರ್‌ ಅವರು ಬಿಜೆಪಿ ಸೇರಿ ಸಚಿವರಾಗುತ್ತಿದ್ದಂತೆಯೇ ಕಾಂಗ್ರೆಸ್‌ನ ಪ್ರಮುಖ ನಾಯಕರು ಕಮಲ ಪಾಳಯ ಸೇರುವ ಪ್ರಕ್ರಿಯೆ ಬಿರುಸುಗೊಂಡಿದೆ. ಶುಕ್ರವಾರ ಬೆಂಗಳೂರಿನ ಸಚಿವ ಸುಧಾಕರ್‌ ಅವರ ಗೃಹ ಕಚೇರಿಯಲ್ಲಿ ಯಾಲಗೆರೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ವಕೀಲ ಕೃಷ್ಣ ಮೂರ್ತಿ ಮತ್ತು ಅವರ ಬೆಂಬಲಿಗರು ಬಿಜೆಪಿ ಸೇರಿದ್ದಾರೆ.

‘ನೀವು ಯಾರ ಭಿಕ್ಷೆಯಿಂದ ಅಧಿಕಾರ ಬಂದಿದ್ದೀರಾ ಅನ್ನೋದನ್ನು ಅರ್ಥ ಮಾಡಿಕೊಳ್ಳಿ’; ವಿಶ್ವನಾಥ್‌ ಕಿಡಿ
ಸುಧಾಕರ್‌ ಅವರು ಹಂತ ಹಂತವಾಗಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ನಗರಸಭೆಗಳಲ್ಲಿ ತಮ್ಮದೇ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷರನ್ನಾಗಿ ಮಾಡಿ ಹಿಡಿತಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಮತ್ತು ನಗರಸಭೆ ಅಧ್ಯಕ್ಷ ಆನಂದಬಾಬು ರೆಡ್ಡಿ ಕೂಡಾ ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ.

ಯಡಿಯೂರಪ್ಪ, ಸಿದ್ದರಾಮಯ್ಯ ಕೃತಜ್ಞತೆ ಇಲ್ಲದ ನಾಯಕರು; ಕುಟುಕಿದ ಹಳ್ಳಿಹಕ್ಕಿ
ಪಂಚಾಯಿತಿ ಮಟ್ಟದಿಂದಲೇ ಬಿಜೆಪಿ ಕಾರ್ಯಕರ್ತರ ಪಡೆ ಬೆಳೆಯುತ್ತಿರುವುದು ಗ್ರಾಪಂ ಚುನಾವಣೆಯಲ್ಲಿ ಸ್ಪಷ್ಟವಾಗಿದೆ. ಸದ್ಯ ಜಿಲ್ಲೆಯ 29 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಅಧಿಕಾರ ಹಿಡಿಯುವ ಸಾಧ್ಯತೆಗಳಿವೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಬಿಜೆಪಿ ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಜಿಪಂನ ಹಲವು ಹಾಲಿ ಸದಸ್ಯರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ ಖಚಿತಪಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ