ಆ್ಯಪ್ನಗರ

ಕೂಲಿ ಕೇಳಿದ್ದಕ್ಕೆ ಮಾಲೀಕನಿಂದ ಮಚ್ಚಿನೇಟು

ತಾಲೂಕಿನ ಕಲ್ಲಹಳ್ಳಿ ಗ್ರಾಮದ ಚಿಕ್ಕಣ್ಣ(45), ರತ್ನಮ್ಮ(38) ಮತ್ತು ರೋಜ(25) ಎಂಬುವರು ಹಲ್ಲೆಗೆ ಒಳಗಾಗಿದ್ದಾರೆ. ಇಟ್ಟಿಗೆ ಫ್ಯಾಕ್ಟರಿ ಮಾಲೀಕ, ಅದೇ ಗ್ರಾಮದ ಶ್ರೀನಿವಾಸ್‌ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Vijaya Karnataka 20 Mar 2019, 2:20 pm
ಚಿಕ್ಕಬಳ್ಳಾಪುರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡಿದ ಹಣವನ್ನು ಕೇಳಿದಕ್ಕೆ ಫ್ಯಾಕ್ಟರಿ ಮಾಲೀಕ ಮಹಿಳೆ ಮತ್ತು ಅತನ ಕುಟುಂಬದವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web crime_1


ತಾಲೂಕಿನ ಕಲ್ಲಹಳ್ಳಿ ಗ್ರಾಮದ ಚಿಕ್ಕಣ್ಣ(45), ರತ್ನಮ್ಮ(38) ಮತ್ತು ರೋಜ(25) ಎಂಬುವರು ಹಲ್ಲೆಗೆ ಒಳಗಾಗಿದ್ದಾರೆ. ಇಟ್ಟಿಗೆ ಫ್ಯಾಕ್ಟರಿ ಮಾಲೀಕ, ಅದೇ ಗ್ರಾಮದ ಶ್ರೀನಿವಾಸ್‌ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ: ಎರಡು ದಿನಗಳ ಹಿಂದೆ ಕಲ್ಲಹಳ್ಳಿ ಗ್ರಾಮದ ಚಿಕ್ಕಣ್ಣ ಎಂಬುವರ ಪುತ್ರಿ ರೋಜಾ ಆದೇ ಗ್ರಾಮದ ಶ್ರೀನಿವಾಸ್‌ ಎಂಬುವರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಕಾಲ ಕೂಲಿ ಕೆಲಸ ಮಾಡಿದ ಹಣವನ್ನು ಕೇಳಲು ಮಂಗಳವಾರ ಫ್ಯಾಕ್ಟರಿಗೆ ಹೋದ ಸಮಯದಲ್ಲಿ ಹಣ ನೀಡುವ ವಿಚಾರದಲ್ಲಿ ಮಾತಿನ ಚಕಮಕಿಯಾಗಿ ಗಲಾಟೆ ನಡೆದಿದೆ. ಮಾಲೀಕ ರೋಜಾಳನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದರು ಎನ್ನಲಾಗಿದೆ. ಬಳಿಕ ಆಕೆ ಫ್ಯಾಕ್ಟರಿ ಪಕ್ಕದಲ್ಲೇ ಇದ್ದ ತಂದೆ ತಾಯಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ರೊಚ್ಚಿಗೆದ್ದ ಇಟ್ಟಿಗೆ ಫ್ಯಾಕ್ಟರಿ ಮಾಲೀಕ ಶ್ರೀನಿವಾಸ ಮಚ್ಚಿನಿಂದ ರೋಜಾಳ ತಂದೆ ಚಿಕ್ಕಣ್ಣನಇಗೆ ಹೊಡೆದಿದ್ದಾರೆ. ಹಲ್ಲೆಯಿಂದ ಹೆಚ್ಚಿನ ರಕ್ತಸ್ರಾವವಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ಬಿಡಿಸಲು ಹೋದ ರೋಜಾ ಹಾಗೂ ರತ್ನಮ್ಮ ಅವರ ಮೇಲೂ ಶ್ರೀನಿವಾಸ್‌ ಹಲ್ಲೆ ಮಾಡಿದ್ದಾನೆ ಎಂದು ದೂರಲಾಗಿದೆ.

ಚಿಂತಾಮಣಿ ಗ್ರಾಮಾಂತರ ಠಾಣೆ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಬಳಿಕ ನಗರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಗಾಯಳುಗಳಿಂದ ಮಾಹಿತಿ ಪಡೆದರು. ಅವರು ನೀಡಿದ ಮಾಹಿತಿ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ