ಆ್ಯಪ್ನಗರ

ಚಿಕ್ಕಬಳ್ಳಾಪುರದ ಗಿಡ್ನಹಳ್ಳಿಯಲ್ಲಿ ಯಡಿಯೂರಪ್ಪ ಬರ ವೀಕ್ಷಣೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬರ ವೀಕ್ಷಣೆ ತಂಡವು ಶುಕ್ರವಾರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಲವೆಡೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿತು.

Vijaya Karnataka 26 Jan 2019, 5:41 pm
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಿಡ್ನಹಳ್ಳಿಯಲ್ಲಿ ಬೆಳೆ ವೀಕ್ಷಣೆ ರೈತರೊಂದಿಗೆ ಸಂವಾದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ
Vijaya Karnataka Web BNG-2501-2-2-25CBPK5

ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ
ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬರ ವೀಕ್ಷಣೆ ತಂಡವು ಶುಕ್ರವಾರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಲವೆಡೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿತು.
ಕೋಲಾರ ಜಿಲ್ಲೆಯಲ್ಲಿ ಮೊದಲು ಬರ ವೀಕ್ಷಣೆ ಮುಗಿಸಿ ಸಂಜೆ 5 ಗಂಟೆ ಸುಮಾರಿಗೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಿಡ್ನಹಳ್ಳಿ ಗ್ರಾಮದ ರೈತ ಜಯರಾಮ್ ಅವರ ಜೋಳ, ರಾಗಿ, ಬತ್ತಿದ ಕೊಳವೆ ಬಾವಿ ಮತ್ತು ಹಿಪ್ಪುನೇರಳೆ ಸೊಪ್ಪಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲಿಯೇ ಇದ್ದ ವಿಲವಾದ ಕೊಳವೆ ಬಾವಿ ಕುರಿತು ರೈತನ ಬಳಿ ಮಾಹಿತಿ ಪಡೆದ ಯಡಿಯೂರಪ್ಪ, ವಿದ್ಯುತ್ ಸಮಸ್ಯೆ ಕುರಿತು ಮಾಹಿತಿ ಪಡೆದರು.
ನಂತರ ಒಣಗಿದ ರಾಗಿ ವೀಕ್ಷೃಣೆ ಸೇರಿ ಎಲ್ಲವನ್ನೂ ಕೇವಲ 5 ನಿಮಿಷದಲ್ಲಿ ಮುಗಿಸಿದ್ದು ವಿಶೇಷ. ನಂತರ ನೇರವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನಕ್ಕೆ ಅಗಮಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಜತೆ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಚರ್ಚಿಸಿ ಮಾಹಿತಿ ಪಡೆದರು.
ಮೊಯ್ಲಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ
‘‘10 ವರ್ಷಗಳು, ಪ್ರಭಾವಿ ಸಚಿವರಾಗಿ ಐದು ವರ್ಷ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಈ ಭಾಗದ ಸಂಸದ ವೀರಪ್ಪ್ಪಮೊಯ್ಲಿ ಅವರಿಗೆ ಅವನ ಕ್ಷೇತ್ರ ಹೇಗೆ ನೋಡಿಕೊಳ್ಳಬೇಕು ಎಂಬ ಅರಿವಿಲ್ಲ
ಸಂಸದ ವೀರಪ್ಪ ಮೊಯ್ಲಿ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಒಬ್ಬ ಸಂಸದನಾಗಿ, ಮಾಜಿ ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ಮಾಡಿದ ಉಪಯೋಗ ಶೂನ್ಯ. ಜವಾಬ್ದಾರಿಯುತ ಸಂಸತ್ ಸದಸ್ಯನ ಸ್ಥಾನದಲ್ಲಿರುವ ವೀರಪ್ಪ ಮೊಯ್ಲಿ ಬೇಜಾವಾಬ್ದಾರಿಯಾಗಿ ಮಾತನಾಡಬಾರದು. ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಪ್ರಧಾನಿ ಅಥವಾ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆಯೇ,’’ ಎಂದು ಪ್ರಶ್ನಿಸಿದರು.
‘‘ಆರೋಪ ಮಾಡುವುದು ಸುಲಭ, ವಿರೋಧ ಪಕ್ಷೃದ ನಾಯಕನಾಗಿ ನನ್ನ ಕರ್ತವ್ಯ ಮಾಡುತ್ತಿದ್ದೇನೆ. ಒಬ್ಬರ ಮೇಲೆ ಬೆರಳು ತೋರಿಸಲು ನಾನು ಇಲ್ಲಿಗೆ ಬಂದಿಲ್ಲ. ಬರಕ್ಕೆ ರಾಜ್ಯ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಆದರೂ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ಸರಿಯಲ್ಲಘಿ,’’ ಎಂದರು.
‘‘ಟಾಸ್ಕ್ ಪೋರ್ಸ್‌ಗೆ ಜಿಲ್ಲೆಯ ಪ್ರತಿ ತಾಲೂಕಿಗೆ 50 ಲಕ್ಷೃ ನೀಡಿರುವುದನ್ನು ಹೊರತುಪಡಿಸಿದರೆ, ಒಂದು ಪೈಸೆ ನೀಡಿಲ್ಲ. ಇನ್ನು ಬಿಜೆಪಿ ವಿರುದ್ಧ ಆಪರೇಷನ್ ಕಮಲದ ಆರೋಪ ಮಾಡುವುದನ್ನು ಬಿಟ್ಟು ಬರ ನಿರ್ವಹಣೆಯತ್ತ ಗಮನ ಹರಿಸಲಿ,’’ ಎಂದು ಆರೋಪಿಸಿದರು.
ಬರ ನಿರ್ವಹಣೆಯಲ್ಲಿ ಜಿಲ್ಲಾಡಳಿತವೂ ವಿಲ
ಚಾಮರಾಜ ನಗರ ಮತ್ತು ಕೋಲಾರ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬರ ನಿರ್ವಹಣಾ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ವಿಲವಾಗಿದೆ ಎಂದು ಯಡಿಯೂರಪ್ಪ ಆರೋಪಿಸಿದರು. ಜಿಲ್ಲೆಯಲ್ಲಿ ಮೇವು, ನೀರಿನ ಸಮಸ್ಯೆ ಎದುರಾಗಿದೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಪರದಾಡುವ ಸ್ಥಿತಿ ಇದೆ. ಆದರೂ ನರೇಗಾ ಸೇರಿದಂತೆ ಇತರೆ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ವೈಲ್ಯ ಕಾಣುತ್ತಿದೆ ಎಂದು ಬಿಎಸ್‌ವೈ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್, ಮುಖಂಡರಾದ ಬೈರೇಗೌಡ, ಆಗಲಗುರ್ಕಿ ಚಂದ್ರಶೇಖರ್ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲೂಕು ಮುಖಂಡರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿ.ಎನ್. ಬಚ್ಚೇಗೌಡ ಸ್ಪರ್ಧಿಸಲಿದ್ದು, ಅವರ ಗೆಲವು ನಿಶ್ಚಿತ. ಕಳೆದ ಬಾರಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿರುವ ಬಿ.ಎನ್. ಬಚ್ಚೇಗೌಡ ಅವರೇ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಅಭ್ಯರ್ಥಿಯಾಗಿದ್ದು, ಅವರ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು.
-ಬಿ.ಎಸ್.ಯಡಿಯೂರಪ್ಪಘಿ, ವಿರೋಧ ಪಕ್ಷದ ನಾಯಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ