ಆ್ಯಪ್ನಗರ

ಪಾಸ್‌ ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಲ್ಲ

ತಾಲೂಕಿನ ತೊಂಡೇಬಾವಿ ಹೋಬಳಿ ಕಡೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್‌ಟಿಸಿ ಬಸ್‌ ನಿಲುಗಡೆ ಮಾಡದೆ ತೊಂದರೆ ನೀಡುತ್ತಿರುವ ಬಗ್ಗೆ ಜಯ ಕರ್ನಾಟಕ ಸಂಘಟನೆ ನಗರದ ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿತು.

Vijaya Karnataka 28 Sep 2019, 4:33 pm
ಕೆಎಸ್ಸಾರ್‌ಟಿಸಿ ಎದುರು ಜಯ ಕರ್ನಾಟಕ ಸಂಘನೆ ಪ್ರತಿಭಟನೆ
Vijaya Karnataka Web 27GBD-2_10

ಗೌರಿಬಿದನೂರು:
ತಾಲೂಕಿನ ತೊಂಡೇಬಾವಿ ಹೋಬಳಿ ಕಡೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್‌ಟಿಸಿ ಬಸ್‌ ನಿಲುಗಡೆ ಮಾಡದೆ ತೊಂದರೆ ನೀಡುತ್ತಿರುವ ಬಗ್ಗೆ ಜಯ ಕರ್ನಾಟಕ ಸಂಘಟನೆ ನಗರದ ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿತು.

ತೊಂಡೇಬಾವಿಯಿಂದ ಗೌರಿಬಿದನೂರು ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಾರಿಗೆ ಬಸ್‌ನಲ್ಲಿಪ್ರಯಾಣ ಮಾಡುತ್ತಿದ್ದು, ಪಾಸ್‌ ವಿದ್ಯಾರ್ಥಿಗಳಿಗೆ ಪ್ರಯಾಣ ನಿರಾಕರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ಹೋಗಲಾಗದೆ ಪರದಾಡುವಂತಾಗಿದೆ ಸಂಘದ ಅಧ್ಯಕ್ಷ ಜಿ.ಎ.ಪ್ರದೀಪ್‌ ಆರೋಪಿಸಿದರು.

ಸಂಘದ ಪ್ರಧಾನ ಕಾರ‍್ಯದರ್ಶಿ ದೇವರಾಜ್‌, ಪಾಸ್‌ ವಿದ್ಯಾರ್ಥಿಗಳಿಗೆ ಪ್ರಯಾಣ ನಿರಾಕರಿಸಿದರೆ ಬಸ್‌ ತಡೆದು ಪ್ರತಿಭಟಿಸುವ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತೊಂಡೇಬಾವಿ ಹೋಬಳಿ ಘಟಕದ ಆಧ್ಯಕ್ಷ ಮುರಳಿ, ನರೇಶ್‌, ಭಾರ್ಗವ್‌, ನವೀನ್‌, ಅರುಣ್‌, ಕರವೇ ಬಣದ ಶ್ರೀಕಂಠ, ಶ್ರೀಧರ್‌, ಎಬಿವಿಪಿ ಸಂಚಾಲಕ ಚರಣ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ