ಆ್ಯಪ್ನಗರ

ಕೇಂದ್ರದ ಯೋಜನೆಗಳು ಪ್ರತಿ ಕುಟುಂಬಕ್ಕೂ ತಲುಪಲಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಂದು ಕುಟುಂಬಕ್ಕೂ ತಲುಪಿಸುವ ಕೆಲಸವನ್ನು ಯುವ ಕಾರ್ಯಕರ್ತರು ಮಾಡಬೇಕು ಎಂದು ಸಾಮಾಜಿಕ ಜಾಲ ತಾಣದ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಚಾಲಕ ವಿ.ವಿಶ್ವನಾಥ್‌ ಹೇಳಿದರು.

Vijaya Karnataka 14 Feb 2019, 5:00 am
ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಂದು ಕುಟುಂಬಕ್ಕೂ ತಲುಪಿಸುವ ಕೆಲಸವನ್ನು ಯುವ ಕಾರ್ಯಕರ್ತರು ಮಾಡಬೇಕು ಎಂದು ಸಾಮಾಜಿಕ ಜಾಲ ತಾಣದ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಚಾಲಕ ವಿ.ವಿಶ್ವನಾಥ್‌ ಹೇಳಿದರು.
Vijaya Karnataka Web central plans can reach every family
ಕೇಂದ್ರದ ಯೋಜನೆಗಳು ಪ್ರತಿ ಕುಟುಂಬಕ್ಕೂ ತಲುಪಲಿ


ನಗರದಲ್ಲಿ ಮಂಗಳವಾರ ಕೇಂದ್ರ ಸರಕಾರದ ಜನಪರ ಕಾರ್ಯಕ್ರಮ ಹಾಗೂ ಮೋದಿ ಆಡಳಿತ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆಯಲ್ಲಿ ಯುವ ಕಾರ್ಯಕರ್ತರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯುವಕರೇ ಪಕ್ಷದ ಬೆನ್ನೆಲುಬು ಆಗಿದ್ದು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಕಾರ ಹಿಡಿದ ನಂತರ ದೇಶದ ಭವಿಷ್ಯ ಬದಲಾಗಿದೆ. ಇಂದು ಇಡೀ ವಿಶ್ವವೇ ಭಾರತದತ್ತ ನಿಬ್ಬೆರಗಾಗಿ ನೋಡುತ್ತಿದ್ದು, ಇದೆಲ್ಲದಕ್ಕೂ ಮೋದಿ ಆಡಳಿತದ ಕಾರ್ಯವೈಖರಿಯೇ ಮೂಲ ಕಾರಣ. ಹಾಗಾಗಿ ಅಂತಹ ನಿಷ್ಠಾವಂತ, ಜನಪರ ಕಾಳಜಿಯುಳ್ಳ ಪ್ರಧಾನ ಮಂತ್ರಿಗಳು ಇರುವ ಪಕ್ಷದಲ್ಲಿ ಇರುವ ನಾವೆಲ್ಲರೂ ಧನ್ಯರು ಎಂದು ಶ್ಲಾಘಿಸಿದರು.

ಜನರಿಗೆ ತಲುಪಿಸಿ: ಕೇಂದ್ರದ ಜನ್‌ದನ್‌, ಮುದ್ರಾಯೋಜನೆ, ಫಸಲ್‌ಭೀಮಾ ಯೋಜನೆ, ಸ್ಟಾರ್ಟ್‌ ಆಫ್‌ ಇಂಡಿಯಾ, ಸ್ಟಾಂಡ್‌ ಆಫ್‌ ಇಂಡಿಯಾದಂತಹ ಹಲವು ಮಹತ್ವದ ಯೋಜನೆಗಳನ್ನು ಕೇಂದ್ರ ಜಾರಿಗೊಳಿಸಿದೆ. ಆದರೆ, ಈ ಯೋಜನೆಗಳು ಜನತೆಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಯುವ ಕಾರ್ಯಕರ್ತರು ಈ ಯೋಜನೆಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಬೇಕು. ಸಾಮಾಜಿಕ ಜಾಲ ತಾಣಗಳನ್ನು ವೇದಿಕೆಯನ್ನಾಗಿ ಮಾಡಿಕೊಳ್ಳಬೇಕು. ಪ್ರತಿಯೊಂದು ಮನೆಗೂ ಕೇಂದ್ರದ ಯೋಜನೆಗಳು ತಲುಪಬೇಕು. ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ತೊಡಬೇಕು ಎಂದು ಕರೆ ಕೊಟ್ಟರು.

ಜಿಲ್ಲಾ ಸಹ ಸಂಚಾಲಕ ಸಂದೀಪ್‌ ರೆಡ್ಡಿ, ತಾಲೂಕು ಸಂಚಾಲಕ ಮಧುರಾಮಮೂರ್ತಿ, ಮುಖಂಡರಾದ ನರಸಪ್ಪ, ಮಹಿಳಾ ಮುಖಂಡರಾದ ಪ್ರೇಮಲೀಲಾ ವೆಂಕಟೇಶ್‌, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್‌ ಹಾಗೂ ನಾನಾ ಮಂಡಲಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ