ಆ್ಯಪ್ನಗರ

ಜಲಸಂರಕ್ಷಣೆ ವೀಕ್ಷಿಸಿದ ಕೇಂದ್ರ ಜಲಶಕ್ತಿ ತಂಡ

ಜಿಲ್ಲೆಯಾದ್ಯಂತ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಸಲುವಾಗಿ ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್‌ ಅಧಿಕಾರಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಪರ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಅವರ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಕ್ಷೇತ್ರ ಪರಿಶೀಲನೆ ನಡೆಸಿತು.

Vijaya Karnataka 28 Sep 2019, 4:27 pm
ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಸಲುವಾಗಿ ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್‌ ಅಧಿಕಾರಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಪರ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಅವರ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಕ್ಷೇತ್ರ ಪರಿಶೀಲನೆ ನಡೆಸಿತು.
Vijaya Karnataka Web 27CBPK8_10


ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು ನೀರಿನ ಸಂರಕ್ಷಣೆ, ಪೂರೈಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಚಿಂತಾಮಣಿ ತಾಲೂಕಿನ ಸಂತೆಕಲ್ಲುಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಲ್ಯಾಣಿ ಮತ್ತು ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅಳವಡಿಸಿರುವ ಮಳೆಕೊಯ್ಲು, ಮುನಗನಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿಮಳೆಕೊಯ್ಲುವೀಕ್ಷಣೆ ಮಾಡಿದರು. ನಂತರ ರಾಗುಟ್ಟಹಳ್ಳಿಯಲ್ಲಿಚೆಕ್‌ ಡ್ಯಾಂ ಮತ್ತು ಅಲಂಗಿರಿಯಲ್ಲಿಕಲ್ಯಾಣಿ ಮತ್ತು ಕೃಷಿ ಹೊಂಡವನ್ನು ವೀಕ್ಷಿಸಿದರು. ಬಾಗೇಪಲ್ಲಿತಾಲ್ಲೂಕಿನ ದೇವರಗುಡಿಪಲ್ಲಿಮತ್ತು ನಲ್ಲಪರೆಡ್ಡಿಪಲ್ಲಿಯಲ್ಲಿಕೆರೆಗಳ ಪುನಶ್ಚೇತನ ಹಾಗೂ ಪ್ಲಾಂಟೇಶನ್‌ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿಕೇಂದ್ರ ಆಯುಷ್‌ ಸಚಿವಾಲಯದ ನಿರ್ದೇಶಕ ಶಶಿ ರಂಜನ್‌ ಕುಮಾರ್‌, ಕೇಂದ್ರ ಅಂತರ್ಜಲ ಮಂಡಳಿಯ ತಾಂತ್ರಿಕ ಅಧಿಕಾರಿ ಯು.ಆರ್‌.ರಾಕಿ, ಜಿಲ್ಲಾಪಂಚಾಯತ್‌ ಉಪ ಕಾರ್ಯದರ್ಶಿ ನೋಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ