ಆ್ಯಪ್ನಗರ

ಪೋಷಣ್‌ ಅಭಿಯಾನಕ್ಕೆ ಚಾಲನೆ ನೀಡಿದ ಸಿಇಒ

ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಟಿಕ ಆಹಾರ ಪಡೆದು, ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಕೇಂದ್ರ ಪುರಸ್ಕೃತ ಯೋಜನೆಯಾದ ಪೋಷಣ್‌ ಅಭಿಯಾನಕ್ಕೆ ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರು ಜಿಪಂ ಸಭಾಂಗಣದಲ್ಲಿಬುಧವಾರ ಚಾಲನೆ ನೀಡಿದರು.

Vijaya Karnataka 5 Sep 2019, 5:00 am
ಚಿಕ್ಕಬಳ್ಳಾಪುರ: ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಟಿಕ ಆಹಾರ ಪಡೆದು, ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಕೇಂದ್ರ ಪುರಸ್ಕೃತ ಯೋಜನೆಯಾದ ಪೋಷಣ್‌ ಅಭಿಯಾನಕ್ಕೆ ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರು ಜಿಪಂ ಸಭಾಂಗಣದಲ್ಲಿಬುಧವಾರ ಚಾಲನೆ ನೀಡಿದರು.
Vijaya Karnataka Web ceo of pauthan campaign
ಪೋಷಣ್‌ ಅಭಿಯಾನಕ್ಕೆ ಚಾಲನೆ ನೀಡಿದ ಸಿಇಒ


ಈ ವೇಳೆ ಮಾತನಾಡಿದ ಅವರು, 2019ರ ಸೆಪ್ಟೆಂಬರ್‌ ತಿಂಗಳನ್ನು ಪೋಷಣ್‌ ತಿಂಗಳು ಎಂದು ಆಚರಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಮ್ಮ ಅಜ್ಜಿಯಂದಿರು ಗರ್ಭಿಣಿಯರ, ಬಾಣಂತಿಯರು ಯಾವ ರೀತಿಯಾಗಿ ಸಮತೋಲನ ನೀಡಿ ಆರೈಕೆ ಮಾಡಬೇಕೆಂದು ನಮಗೆ ಹೇಳಿಕೊಡುತ್ತಿದ್ದರು. ಆದರೆ, ಈಗ ಮತ್ತಷ್ಟು ಅರಿವು ಬೇಕಾಗಿರುವುದರಿಂದ ಸರಕಾರ ಈ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಈ ಯೋಜನೆಯಡಿ ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಠಿಕ ಆಹಾರ ಸೇವನೆ ಮಾಡುವುದು. ರಕ್ತ ಹೀನತೆ, ಅತಿಸಾರ ಭೇದಿ ತಡೆಗಟ್ಟುವುದು, ಪೌಷ್ಟಿಕ ಆಹಾರ ಪೂರೈಕೆ ಮಾಡುವುದರ ಮೂಲಕ ತಾಯಿ ಮತ್ತು ಶಿಶುವಿನ ಉತ್ತಮ ಆರೋಗ್ಯ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.

ಸರಕಾರ ನಾಗರಿಕರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ, ಆ ಯೋಜನೆಗಳ ಸಮರ್ಪಕವಾಗಿ ಜಾರಿಯಾಗಬೇಕಾದರೆ ಎಲ್ಲರ ಸಹಕಾರ ಅಗತ್ಯ. ಈ ಅಭಿಯಾನದ ಯಶಸ್ವಿಗೆ ಎಲ್ಲಇಲಾಖೆಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳು, ನಾಗರಿಕರು ಕೈಜೋಡಿಸಬೇಕು. ಪೋಷಣ್‌ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಉಪಾಧ್ಯಕ್ಷೆ ನಿರ್ಮಾಲಾ ಮುನಿರಾಜ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿನ ಬಾಣಂತಿಯರು, ಗರ್ಭಿಣಿಯರಲ್ಲಿಸ್ವಚ್ಛತೆಯ ಬಗ್ಗೆ ಹೆಚ್ಚಿನ ಮಟ್ಟದ ಅರಿವು ಬೇಕಾಗಿದೆ. ಈ ನಿಟ್ಟಿನಲ್ಲಿಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳು ಅರಿವು ಮೂಡಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕಿ ಬಿ.ಎಂ. ಲಕ್ಷಿತ್ರ್ಮದೇವಮ್ಮ ಮಾತನಾಡಿ, ರಕ್ತಹೀನತೆ, ಸ್ವಚ್ಛತೆ ವಿಷಯಗಳ ಬಗ್ಗೆ ಸೆಪ್ಟೆಂಬರ್‌ ತಿಂಗಳಲ್ಲಿಜಿಲ್ಲೆಯಲ್ಲಿಗ್ರಾಮ ಮಟ್ಟದಿಂದ ನಗರ ಮಟ್ಟದವರೆಗೂ ಪ್ರತಿಯೊಬ್ಬ ಜನಸಾಮಾನ್ಯರಿಗೂ ಅರಿವು ಮೂಡಿವು ಕಾರ್ಯಕ್ರಮ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿಆರ್‌ಸಿಎಚ್‌ ಅಧಿಕಾರಿ ಡಾ.ಚೆನ್ನಕೇಶವ ರೆಡ್ಡಿ, ಮಕ್ಕಳ ತಜ್ಞ ಡಾ.ಪ್ರಕಾಶ್‌, ಪೌಷ್ಟಿಕ ಆಹಾರತಜ್ಞೆ ಡಾ.ಮಂಜುಳಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ