ಆ್ಯಪ್ನಗರ

ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಕಳಂಕ

ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿದ ಕಳಂಕ. ಬಡತನ, ನಿರುದ್ಯೋಗ ಇತರ ಕಾರಣಗಳಿಂದ ಸಮಾಜದಲ್ಲಿ ಈ ಪದ್ಧತಿ ಬೇರೂರಿದೆ. ಆದ್ದರಿಂದ ಸರಕಾರ ಬಡತನ ಹೋಗಲಾಡಿಸಲು ಆಹಾರ ಭದ್ರತೆ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆರ್‌.ಶಿವಕುಮಾರ್‌ ತಿಳಿಸಿದರು.

Vijaya Karnataka 14 Jun 2019, 5:00 am
ಗುಡಿಬಂಡೆ: ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿದ ಕಳಂಕ. ಬಡತನ, ನಿರುದ್ಯೋಗ ಇತರ ಕಾರಣಗಳಿಂದ ಸಮಾಜದಲ್ಲಿ ಈ ಪದ್ಧತಿ ಬೇರೂರಿದೆ. ಆದ್ದರಿಂದ ಸರಕಾರ ಬಡತನ ಹೋಗಲಾಡಿಸಲು ಆಹಾರ ಭದ್ರತೆ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆರ್‌.ಶಿವಕುಮಾರ್‌ ತಿಳಿಸಿದರು.
Vijaya Karnataka Web child labor is a blatant society
ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಕಳಂಕ


ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ, ತಾಲೂಕು ಆಡಳಿತ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳಿಗೆ ಉಚಿತ ಶಿಕ್ಷ ಣ, ಬಾಲ ಕಾರ್ಮಿಕರಿಗಾಗಿ ವಿಶೇಷ ಶಾಲೆ, ಕಡ್ಡಾಯ ಶಿಕ್ಷ ಣ ಸೇರಿದಂತೆ ಸರಕಾರಿ ಸೌಲಭ್ಯ ಬಳಕೆ ಮಾಡಿಕೊಳ್ಳುವ ಮೂಲಕ ಬಾಲ ಕಾರ್ಮಿಕ ಪದ್ಧತಿ ಮುಕ್ತ ಸಮಾಜ ನಿರ್ಮಾಣವಾಗಬೇಕು. ಸಾರ್ವಜನಿಕರು ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಧ್ವನಿ ಎತ್ತಬೇಕು ಎಂದರು.

ಬಾಲಕರನ್ನು ದುಡಿಮೆಗೆ ಹಚ್ಚಿದರೆ ಅವರ ಮನಸ್ಸು ಹಾಗೂ ದೇಹದ ಮೇಲೆ ದುಷ್ಪರಿಣಾಮ ಬೀರಲಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಗ್ರಾಮೀಣ ಭಾಗದಲ್ಲಿ ಪರಿಸ್ಥಿತಿಯ ಒತ್ತಡ, ಆರ್ಥಿಕ ಸಮಸ್ಯೆಯಿಂದ ಮಕ್ಕಳನ್ನು ದುಡಿಮೆಗೆ ಹಚ್ಚುವುದರಿಂದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ ಎಂದರು.

ಕ್ಷೇತ್ರ ಶಿಕ್ಷ ಣಾಧಿಕಾರಿ ಕೆ.ಎಂ.ಜಯರಾಮ ರೆಡ್ಡಿ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಇಂದಿಗೂ ಮಕ್ಕಳನ್ನು ದುಡಿಮೆಗೆ ಸೇರಿಸುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಶಿಕ್ಷ ಣದಿಂದ ಮಾತ್ರ ಈ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸಾಧ್ಯ ಎಂದರು.

ಬಾಲ ಕಾರ್ಮಿಕ ಪದ್ಧತಿಯಿಂದ ಹಲವು ಮಕ್ಕಳು ಶಿಕ್ಷ ಣದಿಂದ ದೂರ ಉಳಿಯುವಂತಾಗುತ್ತಿದೆ. ಇದರ ಬಗ್ಗೆ ಶಿಕ್ಷ ಣ ಇಲಾಖೆ ಸಾಕಷ್ಟು ಯೋಜನೆ ರೂಪಿಸುವ ಮೂಲಕ ಅಂತಹ ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಒತ್ತು ನೀಡಲಾಗುತ್ತಿದೆ. ಯಾವ ಪೋಷಕರು ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಾರೋ ಅಂತಹವರ ಪಡಿತರ ಚೀಟಿ ಸೇರಿದಂತೆ ಇತರೆ ಸರಕಾರಿ ಸೌಲಭ್ಯಗಳನ್ನು ಕಡಿತಗೊಳಿಸಬೇಕು. ಸರಕಾರ ಈ ಬಗ್ಗೆ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಹಿರಿಯ ವಕೀಲ ಶಿವಾನಂದ ರೆಡ್ಡಿ, ಬಾಲ ಕಾರ್ಮಿಕ ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ತಹಸೀಲ್ದಾರ್‌ ಡಿ.ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಪಿ.ಶಿವಪ್ಪ ಮಾತನಾಡಿದರು.

ಬಾಲ ಕಾರ್ಮಿಕ ವಿರೋಧಿ ಬಗ್ಗೆ ನಡೆಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜಿ.ಎಂ. ಹೇಮಂತ್‌ ಪ್ರಥಮ ಸ್ಥಾನ ಪಡೆದಿದ್ದಾನೆ. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು.

ವಕೀಲರರಾದ ರಾಮನಾಥ ರೆಡ್ಡಿ, ನಾರಾಯಣಸ್ವಾಮಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಆರ್‌. ದಿವ್ಯಾ, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷ ಕಿ ಜಿ.ವಿ. ಗಂಗರತ್ನಮ್ಮ, ಸರಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯ ಶಿಕ್ಷ ಕಿ ತಹಸೀನ್‌ ತಾಜ್‌, ಸಹ ಶಿಕ್ಷ ಕರಾದ ವಿ.ವೆಂಕಟೇಶ್‌, ಇಸ್ಮಾಯಿಲ್‌, ಕಾನೂನು ಸೇವಾ ಸಮಿತಿಯ ಸುರೇಶ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ