ಆ್ಯಪ್ನಗರ

ಕ್ರಿಮಿನಲ್ ಮೊಕದ್ದಮೆ: ಕೈ ಏಜೆಂಟರನ್ನು ಬೂತ್‌ನಿಂದ ಹೊರಹಾಕಿದ ಎಸ್ಐ

ಕರ್ನಾಟಕದ 15 ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಮತದಾನ ನಡೆಯುತ್ತಿದೆ. ಜಿದ್ದಾಜಿದ್ದಿ ಕಣ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಕಂಡುಬಂದಿದೆ.

Vijaya Karnataka Web 5 Dec 2019, 1:52 pm
ಚಿಕ್ಕಬಳ್ಳಾಪುರ: ರೆಡ್ಡಿಗೊಲ್ಲರಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಕಾಂಗ್ರೆಸ್ ಏಜೆಂಟsರನ್ನು ಪೊಲೀಸರು ಹೊರಹಾಕಿದ್ದಾರೆ.
Vijaya Karnataka Web ವಿವಿ ಪ್ಯಾಟ್‌
ವಿವಿ ಪ್ಯಾಟ್‌


ಏಜೆಂಟರ ಮೇಲೆ ಕ್ರಿಮಿನಲ್ ಮೊಕದ್ದಮೆ ಇದೆ ಎನ್ನುವ ನೆಪ ಹೇಳಿ ಹೊರಹಾಕಿದ್ದಾರೆಂದು ಆರೋಪಿಸಿದ್ದಾರೆ.

ಈ ಮೂಲಕ ಚುನಾವಣಾ ಆಯೋಗದ ನಿಯಮಕ್ಕೆ ವಿರುದ್ಧವಾಗಿ ಪೊಲೀಸರು ನಡೆದುಕೊಂಡಿದ್ದಾರೆ ಎನ್ನಲಾಗಿದೆ.

ಕ್ರಿಮಿನಲ್ ಮೊಕದ್ದಮೆ ಇರುವವರು ಏಜೆಂಟ್ ಆಗಬಾರದು ಎನ್ನುವ ನಿಯಮವಿಲ್ಲ. ಆದ್ರೂ ನೆಪ ಹೇಳಿ ಕಾಂಗ್ರೆಸ್ ಏಜೆಂಟ್ ಬಿ.ಎ.ಚೇತನ್ ಕುಮಾರ್ರನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಎಸ್ಪಿ ಚೇತನ್ ಗೌಡ ಹೊರಹಾಕಿದ್ದಾರೆ.

ಪೊಲೀಸರ ಕ್ರಮದಿಂದ ಮತಗಟ್ಟೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು. ಬಳಿಕ ಸ್ಥಳಕ್ಕೆ ಬಂದ ಎಸ್ಪಿ ಅಭಿನವ್ ಖರೆ, ಕಾಂಗ್ರೆಸ್ ಏಜೆಂಟ್ ಚೇತನ್‌ಗೆ ಮರು ಅವಕಾಶ ಮಾಡಿಕೊಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ