ಆ್ಯಪ್ನಗರ

ದಲಿತ ಮಹಿಳೆ ನಾರಾಯಣಮ್ಮನ ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

ಸೀತಹಳ್ಳಿಯ ದಲಿತ ಕುಟುಂಬದ ನಾರಾಯಣಮ್ಮನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವ ಬದಲಿಗೆ ಪೊಲೀಸರು ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷ ದ ರಾಜ್ಯಾಧ್ಯಕ್ಷ ಪ್ರೊ.ಹರಿರಾಮ್‌ ಆರೋಪಿಸಿದರು.

Vijaya Karnataka 27 Feb 2019, 5:00 am
ಶಿಡ್ಲಘಟ್ಟ: ಸೀತಹಳ್ಳಿಯ ದಲಿತ ಕುಟುಂಬದ ನಾರಾಯಣಮ್ಮನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವ ಬದಲಿಗೆ ಪೊಲೀಸರು ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷ ದ ರಾಜ್ಯಾಧ್ಯಕ್ಷ ಪ್ರೊ.ಹರಿರಾಮ್‌ ಆರೋಪಿಸಿದರು.
Vijaya Karnataka Web dalit woman narayanans murder demand arrest of the culprit
ದಲಿತ ಮಹಿಳೆ ನಾರಾಯಣಮ್ಮನ ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ


ತಾಲೂಕಿನ ಸಾದಲಿಯಲ್ಲಿ ಬಹುಜನ ಸಮಾಜ ಪಕ್ಷ ದಿಂದ ಹಮ್ಮಿಕೊಂಡಿದ್ದ ಪ್ರಗತಿಪರ ಚಿಂತಕರ ಸಮಾವೇಶ ಹಾಗೂ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಗಡಿಯಲ್ಲಿ ಸೈನಿಕ ದೇಶವನ್ನು ಕಾಯುತ್ತಾನೆ. ದೇಶದ ಒಳಗೆ ನಮ್ಮನ್ನು ಕಾಪಾಡಬೇಕಾದ ಪೊಲೀಸರು ಆರೋಪಿಗಳಿಗೆ ರಕ್ಷ ಣೆ ನೀಡಿದರೆ, ನಾವು ಯಾರನ್ನು ನಂಬಬೇಕು ಎಂದು ಪ್ರಶ್ನಿಸಿದರು.

ನಮ್ಮ ಸುತ್ತಮುತ್ತ ಎಲ್ಲಿಯೇ ಆಗಲಿ ಅನ್ಯಾಯ ಕಂಡರೆ ಅದರ ವಿರುದ್ಧ ಧ್ವನಿ ಎತ್ತುವ ಮನೋಭಾವ ಬೆಳೆಯಬೇಕು, ಅಂತಹ ಪೂರಕ ವ್ಯವಸ್ಥೆ ನಿರ್ಮಾಣವಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೋರಾಟದ ಧ್ವನಿಯನ್ನು ಅಡಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದರೂ ನಮ್ಮ ಹೋರಾಟವನ್ನು ಅಡಗಿಸುವ ಕೆಲಸ ಯಾರಿಂದಲೂ ಯಾವಾಗಲೂ ಆಗದು ಎಂದು ಹೇಳಿದರು.

ದಲಿತ ಮಹಿಳೆ ನಾರಾಯಣಮ್ಮನ ಕೊಲೆ ಆರೋಪಿಗಳೆಲ್ಲರನ್ನೂ ಬಂಧಿಸಿ, ಕೂಡಲೆ ಕಾನೂನು ಕ್ರಮ ಜರುಗಿಸುವಂತೆ ಎಸ್ಪಿ ಸಂತೋಷ್‌ ಬಾಬು ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಕಾರ್ಯದರ್ಶಿ ಪಿ.ವಿ. ನಾಗಪ್ಪ, ಜಿಲ್ಲಾಧ್ಯಕ್ಷ ಎಚ್‌.ಆರ್‌.ರಾಜಶೇಖರ್‌, ಉಪಾಧ್ಯಕ್ಷ ವೆಂಕಟೇಶ್‌, ಮುಖಂಡರಾದ ಮೂರ್ತಿ, ಶ್ರೀನಿವಾಸ್‌, ದಿಲೀಪ್‌ ಕುಮಾರ್‌, ವರಪ್ರಸಾದ್‌, ಬಾಲು, ಶ್ರೀನಿವಾಸ್‌, ದಲಿತ ಮುಖಂಡರಾದ ದ್ಯಾವಕೃಷ್ಣಪ್ಪ, ವೆಂಕಟೇಶ್‌ ಇನ್ನಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ