ಆ್ಯಪ್ನಗರ

ಗೌರಿಬಿದನೂರು ಬಳಿ ಭೀಕರ ಅಪಘಾತ: ಮಹಿಳೆ ಸಾವು, 8ಕ್ಕೂ ಅಧಿಕ ಮಂದಿಗೆ ಗಾಯ

ಆಟೋ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ಪಟ್ಟಣದ ಮುಧುಗಿರಿ ಮಾರ್ಗದಲ್ಲಿ ನಡೆದಿದೆ.

Vijaya Karnataka Web 1 Sep 2019, 7:18 pm
ಚಿಕ್ಕಬಳ್ಳಾಪುರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗೌರಿಬಿದನೂರು ಪಟ್ಟಣದ ಮುಧುಗಿರಿ ಮಾರ್ಗದ ಗುಂಡಾಪುರ ಬಳಿ ನಡೆದಿದೆ.
Vijaya Karnataka Web auto


ಅಪಘಾತಕ್ಕೀಡಾದವರು ರೇಮಂಡ್ ಗಾರ್ಮೆಂಟ್ಸ್‌ನ ಮಹಿಳಾ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವವರನ್ನು ಗೌರಿಬಿದನೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಇಬ್ಬರ ಸ್ಥತಿ ಚಿಂತಾಜನಕವಾಗಿದೆ.

ಭೀಕರ ಅಪಘಾತಕ್ಕೆ ಆಟೋ ನಜ್ಜುಗುಜ್ಜಾಗಿದ್ದು, ಚಾಲಕನ ಸ್ಥಿತಿ ಕೂಡ ಗಂಭೀರವಾಗಿದೆ. ಘಟನೆ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ