ಆ್ಯಪ್ನಗರ

ವಿದ್ಯಾವಂತರೇ ತಂದೆ, ತಾಯಿಗಳನ್ನು ವೃದ್ಧಾಶ್ರಮಕ್ಕೆ ದೂಡುತ್ತಿದ್ದಾರೆ: ನ್ಯಾ.ಕೋರಡ್ಡಿ

ವಿದ್ಯಾವಂತರು, ಬುದ್ಜೀವಿಗಳು ಹಾಗೂ ಶ್ರೀಮಂತರ ಮಕ್ಕಳೇ ಹೆಚ್ಚಾಗಿ ತಮ್ಮ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಿಗೆ ಬಿಟ್ಟು ಹೋಗುತ್ತಿರುವುದು ನೋವಿನ ಸಂಗತಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀೕಶ ಎಸ್‌.ಎಚ್‌.ಕೋರಡ್ಡಿ ವಿಷಾದ ವ್ಯಕ್ತಪಡಿಸಿದರು.

Vijaya Karnataka 6 Jan 2019, 5:00 am
ಚಿಕ್ಕಬಳ್ಳಾಪುರ: ವಿದ್ಯಾವಂತರು, ಬುದ್ಜೀವಿಗಳು ಹಾಗೂ ಶ್ರೀಮಂತರ ಮಕ್ಕಳೇ ಹೆಚ್ಚಾಗಿ ತಮ್ಮ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಿಗೆ ಬಿಟ್ಟು ಹೋಗುತ್ತಿರುವುದು ನೋವಿನ ಸಂಗತಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀೕಶ ಎಸ್‌.ಎಚ್‌.ಕೋರಡ್ಡಿ ವಿಷಾದ ವ್ಯಕ್ತಪಡಿಸಿದರು.
Vijaya Karnataka Web educated puts parents and mother to old age justice s h koreddy
ವಿದ್ಯಾವಂತರೇ ತಂದೆ, ತಾಯಿಗಳನ್ನು ವೃದ್ಧಾಶ್ರಮಕ್ಕೆ ದೂಡುತ್ತಿದ್ದಾರೆ: ನ್ಯಾ.ಕೋರಡ್ಡಿ


ನಗರದ ಪತ್ರಕರ್ತರ ಭವನದಲ್ಲಿ ಕಾನೂನು ಸೇವೆಗಳ ಪ್ರಾಕಾರ, ಕಂದಾಯ ಇಲಾಖೆ, ಹಿರಿಯ ನಾಗರಿಕ ಮತ್ತು ಅಂಗವಿಕಲರ ಕಲ್ಯಾಣ ಇಲಾಖೆ , ಜಿಲ್ಲಾ ಹಿರಿಯ ನಾಗರಿಕ ವೇದಿಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಕಾನೂನು ಅರಿವು ನೆರವು ಹಾಗೂ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆತು ಹಿರಿಯರನ್ನು ಕಡೆಣಿಸುತ್ತಿದ್ದಾರೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ತಂದೆ-ತಾಯಿಗೆ ನಾವು ಯಾವ ರೀತಿಯಲ್ಲಿ ಗೌರವ, ಪ್ರೀತಿ ನೀಡುತ್ತೆವೋ ಅದೇ ರೀತಿ ನಮ್ಮ ಮಕ್ಕಳು ನಮ್ಮನ್ನು ನೋಡಿ ಕಲಿತುಕೊಳ್ಳುತ್ತಾರೆ. ಅದಕ್ಕಾಗಿಯಾದರೂ ಹಿರಿಯರನ್ನು ಪ್ರೀತಿ, ಗೌರವದಿಂದ ಕಾಣಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಕಾರಿ ಡಾ.ರವಿಶಂಕರ್‌ ಮಾತನಾಡಿ, ಹಿರಿಯರ ಅನುಭವಗಳು ಮಕ್ಕಳಿಗೆ ಅಗತ್ಯ. ಯುವಜನರು ವಿದ್ಯಾರ್ಥಿ ಜೀವನದಲ್ಲಿ ಕನಿಷ್ಟ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನೇಕ ಯೋಜನೆಗಳಿವೆ, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲಾಸ್ಪತ್ರೆಯಲ್ಲಿ ಹಿರಿಯ ಸ್ತ್ರೀ, ಪುರುಷರಿಗಾಗಿ ಎರಡು ಪ್ರತ್ಯೇಕ ವಿಭಾಗಗಳನ್ನು ಮಾಡಲು ಸ್ಥಳ ಗುರುತಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಹಿರಿಯ ಸಿವಿಲ್‌ ನ್ಯಾಯಾಧೀಶ ಎಚ್‌.ದೇವರಾಜ್‌, ಜಿಲ್ಲಾ ಹಿರಿಯ ನಾಗರಿಕರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌, ವಕೀಲ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್‌.ತಮ್ಮೇಗೌಡ, ಉಪಾಧ್ಯಕ್ಷ ಕೆ.ವಿ.ಬಾಲಾಜಿ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ವಿನೋದ್‌ ಕುಮಾರ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ