ಆ್ಯಪ್ನಗರ

ಕಾಡುಮಲ್ಲೇಶ್ವರ ಬೆಟ್ಟದ ಅಭಿವೃದ್ಧಿಗೆ ಒತ್ತು: ಶಾಸಕ

ನಗರಕ್ಕೆ ಹೊಂದಿಕೊಂಡಂತಿರುವ ಕಾಡುಮಲ್ಲೇಶ್ವರ ಬೆಟ್ಟದಲ್ಲಿರುವ ಕಾಡುಮಲ್ಲೇಶ್ವರಸ್ವಾಮಿ ದೇವಾಲಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ದೇವಾಲಯದವರೆಗೂ ಸೂಕ್ತ ವಿದ್ಯುತ್‌, ರಸ್ತೆ ಸೇರಿದಂತೆ ಹಲವು ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ತಿಳಿಸಿದರು.

Vijaya Karnataka 5 Mar 2019, 5:00 am
ಚಿಂತಾಮಣಿ: ನಗರಕ್ಕೆ ಹೊಂದಿಕೊಂಡಂತಿರುವ ಕಾಡುಮಲ್ಲೇಶ್ವರ ಬೆಟ್ಟದಲ್ಲಿರುವ ಕಾಡುಮಲ್ಲೇಶ್ವರಸ್ವಾಮಿ ದೇವಾಲಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ದೇವಾಲಯದವರೆಗೂ ಸೂಕ್ತ ವಿದ್ಯುತ್‌, ರಸ್ತೆ ಸೇರಿದಂತೆ ಹಲವು ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ತಿಳಿಸಿದರು.
Vijaya Karnataka Web emphasize development of the kodumaleshwar hill mla
ಕಾಡುಮಲ್ಲೇಶ್ವರ ಬೆಟ್ಟದ ಅಭಿವೃದ್ಧಿಗೆ ಒತ್ತು: ಶಾಸಕ


ಮಹಾಶಿವರಾತ್ರಿ ಪ್ರಯುಕ್ತ ನಗರದ ಕಾಡುಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಭಾಗಿಯಾದ ಅವರು, ಈ ಬಾರಿ ಕಾರಣಾಂತರಗಳಿಂದ ಮಳೆ, ಬೆಳೆ ಇಲ್ಲದಂತಾಗಿ ಜನ ಜಾನುವಾರುಗಳು ತತ್ತರಿಸಿವೆ. ಈ ಬಾರಿಯಾದರೂ ನಮ್ಮ ಮೊರೆಯನ್ನು ಶಿವ ಆಲಿಸುವಂತಾಗಲಿ. ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಮುಖಂಡರಾದ ಕೆ.ಎಂ.ರಾಜಶೇಖ ರೆಡ್ಡಿ, ಅಬ್ಬುಗುಂಡು ನಾಗರಾಜರೆಡ್ಡಿ, ಮಧು, ಶ್ರೀನಿವಾಸರೆಡ್ಡಿ, ಕೊತ್ತೂರು ಬಾಬು, ದೇವಳಂ ಶಂಕರ್‌, ಆರ್‌.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

ನಗರದ ನಾನಾ ಕಡೆ ಮಹಾಶಿವರಾತ್ರಿ ಸಡಗರ: ನಗರದಲ್ಲಿರುವ ಎಲ್ಲ ಶಿವನ ದೇವಾಲಯಗಳಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗಿನಿಂದಲೇ ನಗರದ ಪ್ರಮುಖ ದೇವಾಲಯಗಳಾದ ಕೈಲಾಸಗಿರಿ, ನಗನಾಥೇಶ್ವರ ದೇವಾಲಯ, ಹರಿಹರೀಶ್ವರ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಶಿವನ ವಿಗ್ರಹಗಳಿಗೆ ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಮಂತ್ರಾಕ್ಷ ತೆಗಳು ನಡೆದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ