ಆ್ಯಪ್ನಗರ

ಪರಿಸರ ರಕ್ಷ ಣೆ ಎಲ್ಲರ ಹೊಣೆ

ನಮ್ಮ ಸುತ್ತಲಿರುವ ಪ್ರಕೃತಿಯನ್ನು ಪೋಷಿಸುವ ಮೂಲಕ ಪರಿಸರ ಉಳಿಸಿ, ಬೆಳೆಸುವ ಗುರುತರವಾದ ಹೊಣೆಗಾರಿಕೆ ಎಲ್ಲ ನಾಗರಿಕರ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್‌ ಹೆಗಡೆ ಹೇಳಿದರು.

Vijaya Karnataka 19 Jun 2019, 5:00 am
ಚಿಕ್ಕಬಳ್ಳಾಪುರ: ನಮ್ಮ ಸುತ್ತಲಿರುವ ಪ್ರಕೃತಿಯನ್ನು ಪೋಷಿಸುವ ಮೂಲಕ ಪರಿಸರ ಉಳಿಸಿ, ಬೆಳೆಸುವ ಗುರುತರವಾದ ಹೊಣೆಗಾರಿಕೆ ಎಲ್ಲ ನಾಗರಿಕರ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್‌ ಹೆಗಡೆ ಹೇಳಿದರು.
Vijaya Karnataka Web environmental protection is everyones responsibility
ಪರಿಸರ ರಕ್ಷ ಣೆ ಎಲ್ಲರ ಹೊಣೆ


ನಗರದ ಬೆಸ್ಟ್‌ ಪಿಯು ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಇಂದು ಪರಿಸರ ಮಾಲಿನ್ಯದಿಂದಾಗಿ ಪ್ರಕೃತಿಯ ಸೌಂದರ್ಯ ದಿನೇ ದಿನೆ ಕಳೆಗುಂದುತ್ತಾ ಸಾಗಿದೆ. ನಮ್ಮಲ್ಲಿರುವ ಪ್ರಾಕೃತಿಕ ಸಂಪನ್ಮೂಲವನ್ನು ವೃದ್ಧಿಸಿಕೊಳ್ಳಲೇ ಬೇಕಾದ ಅನಿವಾರ್ಯ ಎದುರಾಗಿದೆ. ಸಾಧ್ಯವಾದಷ್ಟು ಹಸಿರೀಕರಣ ಮಾಡುವುದರೊಂದಿಗೆ ಪರಿಸರ ನೈರ್ಮಲ್ಯವನ್ನು ನಮ್ಮ ಗುರಿಯನ್ನಾಗಿಸಿಕೊಳ್ಳದಿದ್ದರೆ ಮುಂದೊಂದು ದಿನ ಅನಾಹುತ ಸಂಭವಿಸುವದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಪರಿಸರ ಸಮತೋಲನ ಕಾಪಾಡಿ:
ವಿದ್ಯಾರ್ಥಿಗಳು ನಮ್ಮ ಸುತ್ತಲ ಪರಿಸರವನ್ನು ಕಾಪಾಡಲು ಜವಾಬ್ದಾರಿ ತೆಗೆದುಕೊಳ್ಳಬೇಕು. ನಾಗರಿಕರಲ್ಲಿ ಪರಿಸರದ ಪ್ರಜ್ಞೆ ಮೂಡಿಸಬೇಕು. ಗಿಡ-ಮರ ನೆಟ್ಟು ಪೋಷಣೆ ಮಾಡುವುದರಿಂದ ಪರಿಸರದಲ್ಲಿನ ಅಸಮತೋಲನವನ್ನು ಸರಿಪಡಿಸಬೇಕಾಗಿದೆ. ಪ್ರತಿಯೊಬ್ಬರು ಗಿಡ ನೆಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಜನ ಗಿಡ ತಮ್ಮ ಮನೆಗಳು ಸೇರಿದಂತೆ ಕೃಷಿ ಭೂಮಿಯ ಬದುಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಸಿರಾಟಕ್ಕೂ ತೊಂದರೆ ಅನುಭವಿಸಬೇಕಾಗುತ್ತದೆ. ಮುಂದಿನ ಪಿಳೀಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ನಗರಸಭೆ ಆಯುಕ್ತ ಉಮಾಕಾಂತ್‌ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಬ್ಬರಲ್ಲಿ ಗಿಡ, ಮರ ಬೆಳೆಸುವ ಮನೋಭಾವ ಬೆಳೆಸಬೇಕು. ಇದರಿಂದ ಪರಿಸರ ಸಂರಕ್ಷ ಣೆಯಾಗುವ ಜತೆಗೆ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಪರಿಸರ ಸಂರಕ್ಷ ಣೆ ಕೆಲವೇ ಒಬ್ಬರಿಗೆ ಸೀಮಿತವಲ್ಲ. ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಪರಿಸರ ಸಂರಕ್ಷ ಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಡಿಡಿಪಿಯು ಸೀತಾರಾಮ ರೆಡ್ಡಿ ಮಾತನಾಡಿ, ಪ್ರತಿಯೊಬ್ಬರು ಜೀವನದ ಒಂದು ಭಾಗವಾಗಿ ಗಿಡ-ಮರ ಪೋಷಿಸಿಸುವ ಅಭ್ಯಾಸ ರೂಢಿಸಿಕೊಳ್ಳಬೇಕಿದೆ. ಇದರಿಂದ ನಾವು ಮುಂದಿನ ಪೀಳಿಗೆಗೆ ಪರಿಸರ ಪ್ರಜ್ಞೆ ಮೂಡಿಸುವ ಜತೆಗೆ ಸ್ವಚ್ಛ ಹಸಿರು ಪರಿಸರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ವೇಳೆ ಬೆಸ್ಟ್‌ ಪಿಯು ಕಾಲೇಜಿನ ಪ್ರಿನ್ಸಿಪಾಲ್‌ ರಘುನಾಥ್‌, ಮುಖಂಡ ಮಂಜುನಾಥ್‌ ರೆಡ್ಡಿ, ಮಲ್ಲಿಕಾರ್ಜುನ, ವಿಜಯ್‌, ಕಿಶೋರ್‌, ಅಖಿಲ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ