ಆ್ಯಪ್ನಗರ

ಮಿಟ್ಟಹಳ್ಳಿಯಲ್ಲಾಗಿದ್ದು ಭೂಕಂಪವಲ್ಲ, ಏರ್‌ ಬ್ಲಾಸ್ಟ್‌

ಮಳೆಯ ನೀರು ಭೂಮಿಯೊಳಗೆ ಜಲ ಪೂರಣವಾಗಿ ಇಂಗುವ ಸಂದರ್ಭದಲ್ಲಿ ಭೂ ಪದರಗಳ ಮಧ್ಯೆ ಇರುವ ಖಾಲಿ ಜಾಗಗಳಿಗೆ ಅಥವಾ ಬಿರುಕುಗಳಿಗೆ ನೀರು ಪ್ರವೇಶಿಸುವ ಸಂದರ್ಭದಲ್ಲಿ ಅಲ್ಲಿದ್ದ ಗಾಳಿ ಸ್ಫೋಟಗೊಂಡು ಭಾರಿ ಶಬ್ದ ಉಂಟಾಗಿರುವ ಸಾಧ್ಯತೆ ಹೆಚ್ಚಿದೆ.

Vijaya Karnataka 11 Nov 2021, 10:54 pm
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಹೋಬಳಿಯ ಮಿಟ್ಟಹಳ್ಳಿ ಗ್ರಾಮಸ್ಥರು ಒಂದೆಡೆ ಭಾರೀ ಸದ್ದಿನಿಂದ ಆತಂಕಗೊಂಡಿದ್ದಾರೆ. ಆದರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹಿರಿಯ ಅಧಿಕಾರಿಗಳು ಮಾತ್ರ ಇದು ಭೂಕಂಪವಲ್ಲವಾಯು ಸ್ಫೋಟವಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಕಳೆದ ಮಂಗಳವಾರದಿಂದ ಕೇಳಿ ಬರುತ್ತಿರುವ ಭಾರೀ ಸದ್ದು ಭೂಕಂಪ ಅಲ್ಲ ಅದು ಏರ್‌ ಬ್ಲಾಸ್ಟ್‌. ಹೀಗಾಗಿ ಈ ಭಾಗದ ಜನರು ಸೇರಿದಂತೆ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹಿರಿಯ ವೈಜ್ಞಾನಿಕ ಅಧಿಕಾರಿ ಎಸ್‌ ಜಗದೀಶ್‌ ಅವರು ಮಿಟ್ಟಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಇದುವರೆಗೂ ವಿವಿಧ ಅವಧಿಯಲ್ಲಿ ಮೂರ್ನಾಲ್ಕು ಸಾರಿ ಭಾರಿ ಸದ್ದು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಅವರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ತಂಡದೊಂದಿಗೆ ಮಿಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಂದ , ತಾಲೂಕು ಆಡಳಿತದ ಅಧಿಕಾರಿಗಳು ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಹಾಗೂ ಭೂ ಕಂಪನ ಮಾಪನ ಕೇಂದ್ರಗಳಿಂದ ಕಲೆಹಾಕಿದ ಮಾಹಿತಿಗಳನ್ನು ಆಧರಿಸಿ ಪ್ರಾಥಮಿಕ ತನಿಖೆ ನಡೆಸಿ ಮಾತನಾಡಿದರು.

ಭೂಮಿ ಕಂಪಿಸಿದ ಮಿಟ್ಟಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಳೆದ 20-25 ವರ್ಷಗಳಿಂದ ಮಳೆ ಪ್ರಮಾಣ ಈ ಭಾಗದಲ್ಲಿ ಕಡಿಮೆ ಇತ್ತು. ಇತ್ತೀಚೆಗೆ ಈ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು ಮಳೆಯ ನೀರು ಭೂಮಿಯೊಳಗೆ ಜಲ ಪೂರಣವಾಗಿ ಇಂಗುವ ಸಂದರ್ಭದಲ್ಲಿ ಭೂ ಪದರಗಳ ಮಧ್ಯೆ ಇರುವ ಖಾಲಿ ಜಾಗಗಳಿಗೆ ಅಥವಾ ಬಿರುಕುಗಳಿಗೆ ನೀರು ಪ್ರವೇಶಿಸುವ ಸಂದರ್ಭದಲ್ಲಿ ಅಲ್ಲಿದ್ದ ಗಾಳಿ ಸ್ಫೋಟಗೊಂಡು ಭಾರಿ ಶಬ್ದ ಉಂಟಾಗಿರುವ ಸಾಧ್ಯತೆ ಹೆಚ್ಚಿದೆ. ಈ ರೀತಿಯ ಶಬ್ದವು ಮುಂದಿನ ದಿನಗಳಲ್ಲೂ ಕಂಡುಬರುವ ಸಾಧ್ಯತೆ ಇದ್ದು,ಮತ್ತೆ ಈ ರೀತಿಯ ಶಬ್ದ ಉಂಟಾದಲ್ಲಿ ಜನರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಅತ್ಯಂತ ಸುರಕ್ಷಿತ ವಲಯ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ತಾಲ್ಲೂಕಿನ ಯಾವುದೇ ಭಾಗದಲ್ಲಿ ಭಾರೀ ಶಬ್ದ ವನ್ನು ಹೊರತುಪಡಿಸಿ ಇನ್ನಾವುದೇ ರೀತಿಯ ಲಘು ಭೂಕಂಪವು ಸಹ ಆಗಿಲ್ಲ.ಚಿಕ್ಕಬಳ್ಳಾಪುರ ಜಿಲ್ಲೆಯು ಭೂಕಂಪ ವಲಯದ ವಿಶ್ಲೇಷಣೆಗೆ ಸಂಬಂಧಿಸಿದಂತೆ ಅತ್ಯಂತ ಸುರಕ್ಷಿತ ವಲಯದಲ್ಲಿದೆ.

ಚಿಕ್ಕಬಳ್ಳಾಪುರದ ಮಿಟ್ಟಹಳ್ಳಿ ಸುತ್ತಮುತ್ತ ಲಘು ಭೂಕಂಪನ; ಆತಂಕದಲ್ಲೇ ರಾತ್ರಿಯಿಡಿ ಗ್ರಾಮಸ್ಥರ ಜಾಗರಣೆ

ಶೀಘ್ರವೇ ವರದಿ

ಈ ತಂಡ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ಕೊಟ್ಟು ಎಲ್ಲಮಾಹಿತಿಗಳನ್ನು ಕಲೆಹಾಕಿ ಅಧ್ಯಯನ ಮಾಡಿ ವಿಶ್ಲೇಷಣೆಗೆ ಒಳಪಡಿಸಿ ಸಂಜೆ ಜಿಲ್ಲಾಧಿಕಾರಿ ಆರ್‌. ಲತಾ ಅವರಿಗೆ ಪ್ರಾಥಮಿಕ ಮಾಹಿತಿ ನೀಡಿ. ಚಿಂತಾಮಣಿ ತಾಲೂಕಿನ ಸಂಭವಿಸಿರುವ ಭಾರೀ ಶಬ್ದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಸರಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಕಿರಿಯ ವೈಜ್ಞಾನಿಕ ಅಧಿಕಾರಿ ಡಾ.ರಮೇಶ್‌ ದಿಕ್ಪಾಲ..., ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಕೃಷ್ಣವೇಣಿ, ಬೋರಪ್ಪ, ತಹಸೀಲ್ದಾರ್‌ ಹನುಮಂತರಾಯಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ