ಆ್ಯಪ್ನಗರ

ಚಿಕ್ಕಬಳ್ಳಾಪುರ: 6.72 ಲಕ್ಷ ರೂ. ಮೌಲ್ಯದ ಗಾಂಜಾ ವಶ, ಆರೋಪಿ ಪರಾರಿ

ಆರೋಪಿ ವಿರುದ್ಧ ಈ ಹಿಂದೆಯೂ ಗಾಂಜಾ ಮಾರಾಟ ಪ್ರಕರಣದಲ್ಲಿ ಬೆಂಗಳೂರು, ತುಮಕೂರು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗಷ್ಟೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದಿರುವುದಾಗಿ ತಿಳಿದು ಬಂದಿದೆ.

Vijaya Karnataka Web 18 Sep 2020, 5:32 pm
ಚಿಕ್ಕಬಳ್ಳಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು 6.72 ಲಕ್ಷ ರು. ಮೌಲ್ಯದ 16 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
Vijaya Karnataka Web ಗಾಂಜಾ ವಶಪಡಿಸಿಕೊಂಡ ಪೊಲೀಸರು
ಗಾಂಜಾ ವಶಪಡಿಸಿಕೊಂಡ ಪೊಲೀಸರು


ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದ್ದು, ದಾಸ್ತಾನು ಮಾಡಿದ್ದ ಆರೋಪಿ ಫಿರದಾಸ್ ಖಾನ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿ ವಿರುದ್ಧ ಈ ಹಿಂದೆಯೂ ಗಾಂಜಾ ಮಾರಾಟ ಪ್ರಕರಣದಲ್ಲಿ ಬೆಂಗಳೂರು, ತುಮಕೂರು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗಷ್ಟೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದಿರುವುದಾಗಿ ತಿಳಿದು ಬಂದಿದೆ.

ಆರೋಪಿ ಫಿರದಾಸ್ ಖಾನ್ನ ಅಣ್ಣ ನಗರದಲ್ಲಿ ಮನೆಯನ್ನು ಲೀಸ್‌ಗೆ ತೆಗೆದುಕೊಂಡು ಕಬಾಬ್ ವ್ಯಾಪಾರ ನಡೆಸುತ್ತಿದ್ದ. ತಮ್ಮ ಮನೆಗೆ ಬಂದು ಈ ಕೃತ್ಯದಲ್ಲಿ ತೊಡಿಗಿದ್ದು, ನನಗೆ ಈ ಕುರಿತು ಮಾಹಿತಿ ಇಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ