ಆ್ಯಪ್ನಗರ

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲು ಆಗ್ರಹ

ಚಿಕ್ಕಬಳ್ಳಾಪುರ ತಾಲೂಕಿನ ಹೀರೆನಾಗವಲ್ಲಿ ಬಳಿ ನಡೆ ಜಿಲೆಟಿನ್‌ ಸ್ಫೋಟದಲ್ಲಿ 6 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ದಸಂಸ ಜಿಲ್ಲಾ ಸಂಚಾಲಕ ಜಿ.ವಿ.ಗಂಗಪ್ಪ ಆಗ್ರಹಿಸಿದ್ದಾರೆ.

Vijaya Karnataka Web 26 Feb 2021, 11:13 pm
ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವಲ್ಲಿ ಬಳಿ ನಡೆದ ಜಿಲೆಟಿನ್‌ ಸ್ಫೋಟದಲ್ಲಿ 6 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ದಸಂಸ ಜಿಲ್ಲಾ ಸಂಚಾಲಕ ಜಿ.ವಿ.ಗಂಗಪ್ಪ ಆಗ್ರಹಿಸಿದ್ದಾರೆ.
Vijaya Karnataka Web chikkaballapura blast


ತಾಲೂಕು ಕಚೇರಿ ಮುಂಭಾಗ ಐಕ್ಯ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಇಡೀ ದೇಶವೇ ಬೆಚ್ಚಿ ಬೀಳುವಂತೆ ನಡೆದ ಭ್ರಮರವಾಸಿನಿ ಜಲ್ಲಿ ಕ್ರಷರ್‌ ಬಳಿಯ ಸ್ಫೋಟದಿಂದಾಗಿ 6 ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ.

ಈ ದುರ್ಘಟನೆಗೆ ಮೂಲ ಕಾರಣ ಹುಡುಕಿದರೆ ಕೆಲವು ಅಧಿಕಾರಿಗಳ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೀರೆನಾಗವಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿದಷ್ಟು ಜಿಲಿಟಿನ್‌ ಸ್ಫೋಟಕಳು ಸಿಗುತ್ತಿದೆ ಎಂದರೆ ಇನ್ನೆಷ್ಟು ಸ್ಪೋಟಕಗಳು ಸಂಗ್ರಹವಾಗಿತ್ತು ಎಂಬುದು ಅರ್ಥವಾಗುತ್ತದೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರಂತ: ಪ್ರಮುಖ ಆರೋಪಿ ಬಿಜೆಪಿ ಮುಖಂಡ ನಾಗರಾಜ್ ಬಂಧನ..!

ಅಕ್ರಮ ಸಂಪಾದನೆಗಾಗಿ ಅಮಾಯಕ ಕಾರ್ಮಿಕರನ್ನು ಸಾವಿಗೆ ದೂಡಿದ ಬಂಡವಾಳಶಾಹಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕು. ಈ ಪ್ರಕರಣವನ್ನು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ವರದರಾಜು ಮಾತನಾಡಿ, ಹೀರೆನಾಗವಲ್ಲಿ ಬಳಿ ನಡೆದ ಸ್ಫೋಟ ಘಟನೆಯಲ್ಲಿ ವಿನಾಕಾರಣ ಗುಡಿಬಂಡೆಯ ಹೆಸರನ್ನು ಸೇರಿಸುತ್ತಿದ್ದಾರೆ. ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಗುಡಿಬಂಡೆ ಹೀರೆನಾಗವಲ್ಲಿ ಎಂದು ಬಿಂಬಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ ಪ್ರಕರಣ: ಕಿಂಗ್‌ಪಿನ್‌ ಸೆರೆ

ತಾಲೂಕಿನಾದ್ಯಂತ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ರಸ್ತೆಗಳು ಹಾಳಾಗುತ್ತಿದೆ. ಜತೆಗೆ ಗಣಿಗಾರಿಕೆಯ ಸುತ್ತಮುತ್ತಲಿನ ಕೃಷಿ ಭೂಮಿಯೂ ಸಹ ಹಾಳಾಗುತ್ತಿದೆ. ಸರಕಾರದಿಂದ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರದೇಶಕ್ಕೂ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಕ್ಕೂ ಏರುಪೇರುಗಳಿವೆ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಲ್ಲಿಅನುಮತಿಯನ್ನೊಳಗೊಂಡ ಮಾಹಿತಿ ಫಲಕ ಅಳವಡಿಸಬೇಕು ಎಂದು ಆಗ್ರಹಿಸಿದರು.

ಐಕ್ಯ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಪಿಎಂ ಪಕ್ಷದ ಜಿಲ್ಲಾಕಾರ್ಯದರ್ಶಿ ಜಯರಾಮರೆಡ್ಡಿ, ತಾಪಂ ಸದಸ್ಯ ಮಂಜುನಾಥ್‌, ಡಿವೈಎಫ್‌ಐನ ಶ್ರೀನಿವಾಸ್‌, ದಲಿತ ಸಂಘರ್ಷ ಸಮಿತಿಯ ಇಸ್ಕೂಲಪ್ಪ, ಆದಿನಾರಾಯಣಪ್ಪ, ನರಸಿಂಹಪ್ಪ, ರೈತ ಸಂಘದ ಆನಂದರೆಡ್ಡಿ ಸೇರಿದಂತೆ ಹಲವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ