ಆ್ಯಪ್ನಗರ

ಚಿಕ್ಕಬಳ್ಳಾಪುರಕ್ಕೆ ನೂತನ ಎಸ್ಪಿಯಾಗಿ ಜಿ.ಕೆ.ಮಿಥುನ್‌ ಕುಮಾರ್‌

Vijaya Karnataka Web 19 Mar 2020, 12:19 pm
ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ಬುಧವಾರ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ನೇಮಕ ಮಾಡಿದೆ.
Vijaya Karnataka Web GK Mithun Kumar


ಮಿಥುನ್‌ ಕುಮಾರ್‌ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ನಕ್ಸಲ್‌ ನಿಗ್ರಹ ಪಡೆಯ ಪೊಲೀಸ್‌ ಅಧೀಕ್ಷಕರಾಗಿದ್ದರು. ಈ ಹಿಂದೆ ಚಿಕ್ಕಬಳ್ಳಾಪುರ ಎಸ್ಪಿ ಆಗಿದ್ದ ಅಭಿನವ್‌ ಖರೆ ಅವರು ಕೇಂದ್ರ ಸೇವೆಗೆ ನಿಯುಕ್ತರಾಗುವ ಜತೆಗೆ ಸಿಬಿಐ ಎಸ್ಪಿ ಆಗಿಯೂ ನಿಯೋಜನೆಗೊಂಡಿದ್ದರು.ಇತ್ತೀಚೆಗಷ್ಟೇ ಅಭಿನವ್‌ ಖರೆ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

2016ನೇ ಬ್ಯಾಚಿನ ಐಪಿಎಸ್‌ ಅಧಿಕಾರಿಯಾದ ಮಿಥುನ್‌ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊಂಡನಹಳ್ಳಿಯವರು ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ