ಆ್ಯಪ್ನಗರ

ಪಿಎಸ್‌ಐ ಪರೀಕ್ಷೆ ಅಕ್ರಮ: ಆರೋಪಿಗಳ ರಕ್ಷಣೆಗೆ ಸರಕಾರ ಯತ್ನ ಎಂದ ಉಗ್ರಪ್ಪ

ಪಿಎಸ್‌ಐ ನೇಮಕಾತಿ ಹಗರಣದಲ್ಲಿಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ರಾಜ್ಯ ಬಿಜೆಪಿ ಸರಕಾರದ್ದೇ ನೇರ ಪಾತ್ರವಿರುವ ಅನುಮಾನವಿದೆ. ಹಾಗಾಗಿಯೇ ಹಗರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳನ್ನು ರಕ್ಷಿಸುವ ಕೆಲಸ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ

Vijaya Karnataka Web 16 Jul 2022, 10:47 pm
ಚಿಕ್ಕಬಳ್ಳಾಪುರ: ಜನಸಾಮಾನ್ಯರ ಬದುಕನ್ನು ಉತ್ತಮ ಪಡಿಸುವಲ್ಲಿ ವಿಫಲವಾಗಿರುವ ರಾಜ್ಯದ ಬಿಜೆಪಿ ಸರಕಾರವು ಜನ ಸಾಮಾನ್ಯರ ಗಮನವನ್ನು ಬೇರೆ ಕಡೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದು ಬಹಳ ದಿನಗಳ ಕಾಲ ರಾಜ್ಯದಲ್ಲಿನಡೆಯುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್‌. ಉಗ್ರಪ್ಪ ಅವರು ಆರೋಪಿಸಿದರು.
Vijaya Karnataka Web ವಿಎಸ್‌ ಉಗ್ರಪ್ಪ
ವಿಎಸ್‌ ಉಗ್ರಪ್ಪ


ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷದ ಅಮೃತ ಮಹೋತ್ಸವ ಅಂಗವಾಗಿ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿರುವ 75 ಕಿಲೋ ಮೀಟರ್‌ ಉದ್ದದ ಪಾದಯಾತ್ರೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಅಮೃತ ಮಹೋತ್ಸವದ ಪೂರ್ವ ಸಿದ್ಧತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿಕ್ಕಬಳ್ಳಾಪುರದಲ್ಲಿ ಇದ್ದೂ ಇಲ್ಲದಂತಾಗಿದೆ ಪಶು ಆಂಬ್ಯುಲೆನ್ಸ್: ಸಿಬ್ಬಂದಿಯೇ ಇಲ್ಲದೆ ನಿಂತಲ್ಲೇ ನಿಂತಿದೆ ವಾಹನ..!

ದೇಶದ ಗಮನ ಸೆಳೆದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ರಾಜ್ಯ ಬಿಜೆಪಿ ಸರಕಾರದ್ದೇ ನೇರ ಪಾತ್ರವಿರುವ ಅನುಮಾನವಿದೆ. ಹಾಗಾಗಿಯೇ ಹಗರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳನ್ನು ರಕ್ಷಿಸುವ ಕೆಲಸ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಆಡಳಿತ ನಡೆಸುವ ಸರಕಾರದ ವಿರುದ್ಧ ಹೋರಾಟ ನಡೆಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಇದನ್ನು ಧಮನಗೊಳಿಸಲಾಗುತ್ತಿದೆ. ಇತ್ತೀಚೆಗೆ ದೇಶದಲ್ಲಿ ಪ್ರಬಲ ಸರ್ವಾಧಿಕಾರಿ ಧೋರಣೆ ತಲೆಎತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಾತನಾಡಿ, ರಾಜ್ಯದಲ್ಲಿ ಶೇ.40 ರಷ್ಟು ಭ್ರಷ್ಟಾಚಾರದ ಆರೋಪವನ್ನು ಗಂಭೀ ರ ವಾಗಿ ಪರಿಗಣಿಸಿಲ್ಲ. ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಪತ್ನಿ ಸ್ವತಃ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿರುವುದರ ಬಗ್ಗೆ ಅಳಲು ತೋಡಿ ಕೊಂಡಿರುವುದು ಆಡಳಿತ ವೈಖರಿಯು ಹೇಗಿದೆ ಎಂಬುದಕ್ಕೆ ನಿದರ್ಶನ ಎಂದರು.

Karnataka Rain: ಜಿಟಿ ಜಿಟಿ ಮಳೆ ಜತೆ ಮೋಡ ಕವಿದ ವಾತಾವರಣ ಎಫೆಕ್ಟ್, ಆಷಾಢದ ಮಳೆಗೆ ನಲುಗಿದ ಹೂ-ತರಕಾರಿ

ಶಿಡ್ಲಘಟ್ಟದ ಶಾಸಕ ವಿ. ಮುನಿಯಪ್ಪ, ಎನ್‌.ಎಚ್‌. ಶಿವಶಂಕರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯ ಅನಿಲ್‌ ಕುಮಾರ್‌, ಮಾಜಿ ಶಾಸಕರಾದ ಡಾ ಎಂ. ಸಿ. ಸುಧಾಕರ್‌, ಎನ್‌. ಸಂಪಂಗಿ, ಎಸ್‌.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ, ಕೆಪಿಸಿಸಿ ಸದಸ್ಯ ವಿನಯ್‌ ಶ್ಯಾಮ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ