ಆ್ಯಪ್ನಗರ

'ಅವರು ಬ್ಲ್ಯಾಕ್‌ಮೇಲ್ ಗಿರಾಕಿಗಳು; ಸೋತವರಿಗೂ ಮಂತ್ರಿಗಿರಿ ಕೊಟ್ಟರೆ ಪ್ರಜಾಪ್ರಭುತ್ವ ಎಲ್ಲಿದೆ?'

ಪಕ್ಷಾಂತರ ಮಾಡಿರುವ ಶಾಸಕರ ಬ್ಲ್ಯಾಕ್‌ಮೇಲ್ ರಾಜಕಾರಣದಿಂದ ಬಿಜೆಪಿ ಪಕ್ಷದಲ್ಲಿ 25, 30 ವರ್ಷ ಕಾಲ ದುಡಿದು ಸಚಿವರಾಗುವ ಅರ್ಹತೆ ಇದ್ದರೂ ಅನೇಕ ಹಿರಿಯರು ಸಚಿವ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಬಿಜೆಪಿ ಸರಕಾರ ಆಡಳಿತದಲ್ಲಿ ಹೆಚ್ಚು ದಿನ ಉಳಿಯವ ಲಕ್ಷಣಗಳು ಕಾಣುತ್ತಿಲ್ಲ ಎಂದು ಶಿವಶಂಕರ್‌ ರೆಡ್ಡಿ ಹೇಳಿದರು.

Vijaya Karnataka Web 14 Dec 2019, 5:36 pm
ಚಿಕ್ಕಬಳ್ಳಾಪುರ: ಅನರ್ಹ ಶಾಸಕರು ಚುನಾವಣೆಯಲ್ಲಿ ಗೆದ್ದ ಮೇಲೆ ಅಲ್ಲಿಯೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಅವರು ಎಲ್ಲಿದ್ಧರೂ ಬ್ಲ್ಯಾಕ್‌ಮೇಲ್ ಗಿರಾಕಿಗಳೆಂದು ಮಾಜಿ ಕೃಷಿ ಸಚಿವ ಎನ್‌ಎಚ್‌ ಶಿವಶಂಕರ ರೆಡ್ಡಿ ಟೀಕಿಸಿದರು.
Vijaya Karnataka Web NH Shivashankar Reddy


ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಪಕ್ಷದಲ್ಲಿ ಅವರು ಬ್ಲ್ಯಾಕ್‌ಮೇಲ್ ಶುರು ಮಾಡಿದ್ದಾರೆ. ಸೋತವರಿಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಕೊಡಬೇಕೆಂದು ಇವರು ಯಡಿಯೂರಪ್ಪ ಬಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ನ್ಯಾಯವೇ? ಈ ರೀತಿಯಾದರೆ ಎಲ್ಲಿದೆ ಪ್ರಜಾಪ್ರಭುತ್ವ,” ಎಂದು ಶಿವಶಂಕರರೆಡ್ಡಿ ಪ್ರಶ್ನಿಸಿದರು.

ಇವರ ಬ್ಲ್ಯಾಕ್‌ಮೇಲ್ ರಾಜಕಾರಣದಿಂದ ಬಿಜೆಪಿ ಪಕ್ಷದಲ್ಲಿ 25, 30 ವರ್ಷ ಕಾಲ ದುಡಿದು ಸಚಿವರಾಗುವ ಅರ್ಹತೆ ಇದ್ದರೂ ಅನೇಕ ಹಿರಿಯ ಮುಖಂಡರು ಸಚಿವ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಬಿಜೆಪಿ ಸರಕಾರ ಆಡಳಿತದಲ್ಲಿ ಹೆಚ್ಚು ದಿನ ಉಳಿಯವ ಲಕ್ಷಣಗಳು ಕಾಣುತ್ತಿಲ್ಲ ಎಂದರು.

ರಾಜ್ಯ ಬಿಜೆಪಿ ಸರಕಾರ, ಬರೀ ಅಧಿಕಾರ ಹಾಗೂ ಚುನಾವಣೆ ನಡೆಸಲು ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಈ ಸರಕಾರಕ್ಕೆ ಯಾವುದೇ ಜನಪರವಾದ ಅಭಿವೃದ್ಧಿ ಕಾಳಜಿ ಇಲ್ಲ ಎಂದು ಶಿವಶಂಕರ ರೆಡ್ಡಿ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ