ಆ್ಯಪ್ನಗರ

ಇಂದಿರಾ ಕ್ಯಾಂಟಿನ್‌, ಹಾಸ್ಟೆಲ್‌, ಶಾಲೆಗಳಲ್ಲಿ ಸಿರಿಧಾನ್ಯದ ಆಹಾರ: ಕೃಷಿ ಸಚಿವ

ಆರೋಗ್ಯ ವೃದ್ಧಿಗೆ ಸಹಕಾರಿಯಾಗಲಿರುವ ಸಾವಯವ ಮತ್ತು ಸಿರಿಧಾನ್ಯಗಳ ಬಳಕೆ ರೈತರಿಗೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಫೆ.2 ಮತ್ತು 3ರಂದು ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿ ಜಿಧಿಲ್ಲೆಯಾದ್ಯಂತ ರೈತರು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಹೆಚ್‌. ಶಿವಶಂಕರರೆಡ್ಡಿ ಮನವಿ ಮಾಡಿದರು.

Vijaya Karnataka 31 Jan 2019, 3:57 pm
ಸಿರಿಧಾನ್ಯಗಳ ಉತ್ತೇಜನಕ್ಕೆ ಸರಕಾರದ ಚಿಂತನೆ; ಕೃಷಿ ಸಚಿವ
Vijaya Karnataka Web CBP-30CBPK1

ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ
ಆರೋಗ್ಯ ವೃದ್ಧಿಗೆ ಸಹಕಾರಿಯಾಗಲಿರುವ ಸಾವಯವ ಮತ್ತು ಸಿರಿಧಾನ್ಯಗಳ ಬಳಕೆ ರೈತರಿಗೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಫೆ.2 ಮತ್ತು 3ರಂದು ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿ ಜಿಲ್ಲೆಯಾದ್ಯಂತ ರೈತರು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಹೆಚ್‌. ಶಿವಶಂಕರರೆಡ್ಡಿ ಮನವಿ ಮಾಡಿದರು.

ನಗರದ ಡಿಡಿಪಿಐ ಕಚೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಮೀನುಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಿರಿಧಾನ್ಯಗಳೆಡೆಗೆ ನಮ್ಮ ನಡಿಗೆ ಜಾಥಾಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಸಂತಸದ ಸಂಗತಿ. ಇತರೆ ಯಾವುದೇ ರಾಜ್ಯಗಳು ಮಾಡದೇ ಇರುವಂತಹ ರೀತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸಾವಯವ ಕೃ ನೀತಿಯನ್ನು ಮಾಡಿದೆ. ಸಿರಿಧಾನ್ಯಗಳನ್ನು ಬೆಳೆಗೆ ಒತ್ತು ನೀಡುವ ಸಲುವಾಗಿ ರೈತರಿಗೆ ಉತ್ತೇಜನ ನೀಡಲು ಹಲವಾರು ಕಾರ್ಯಕ್ರಮಗಳನ್ನು ಅನೇಕ ವರ್ಷಗಳಿಂದ ಕೃಷಿ ಇಲಾಖೆ ಹಮ್ಮಿಕೊಂಡು ಬಂದಿದೆ ಎಂದರು.

ಸಿರಿಧಾನ್ಯ ಬೆಳೆದ ರೈತರಿಗೆ ವರದಾನ

ನಮ್ಮ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ. ಹಾಗಾಗಿ, ಅತಿ ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯಲು ಇಲ್ಲಿನ ರೈತರು ಮುಂದಾಗಬೇಕು. ನೂರು ವರ್ಷಗಳ ಹಿಂದೆ ಪ್ರತಿ ಹಳ್ಳಿಗಳಲ್ಲಿ ಸಿರಿಧಾನ್ಯಗಳನ್ನು ಹೇರಳವಾಗಿ ಬೆಳೆಯಲಾಗುತ್ತಿತ್ತು. ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯ ಚೆನ್ನಾಗಿರುತ್ತದೆ ಎಂದರು.

ರೈತರಿಗೆ ಪ್ರೋತ್ಸಾಹ ಧನ

ಈ ಬಾರಿಯ ಬಜೆಟ್‌ನಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಬೇಕು ಹಾಗೂ ಸಿರಿಧಾನ್ಯ ಸಂಸ್ಕರಣೆಗೆ ಹಣ ಸಹಾಯ ಮಾಡುವ ಯೋಜನೆ ರೂಪಿಸಬೇಕು ಎಂದು ಈಧಿಗಾಧಿಗಲೇ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ. ಇದರ ಜತೆಗೆ ಇಂದಿರಾ ಕ್ಯಾಂಟಿನ್‌, ವಿದ್ಯಾರ್ಥಿ ವಸತಿ ನಿಲಯಗಳು ಹಾಗೂ ಶಾಲೆಗಳಲ್ಲಿ ವಾರಕೊಮ್ಮೆ ಸಿರಿಧಾನ್ಯದ ಆಹಾರ ಪೂರೈಕೆ ಮಾಡುವ ವ್ಯವಸ್ಥೆ ಜಾರಿ ಮಾಡಲು ಈಗಾಗಲೇ ಸರ್ಕಾರ ಚಿಂತನೆ ನಡೆಸಿದೆ. ಹಾಗಾಗಿ, ರೈತರು ಸಿರಿಧಾನ್ಯಗಳನ್ನು ಬೆಳೆಯಲು ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.

ಜಿ.ಪಂ. ಅಧ್ಯಕ್ಷ ಎಚ್‌.ವಿ. ಮಂಜುನಾಥ್‌ ಮಾಧಿತಧಿನಾಡಿ, ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಸಾವಯವ ಮತ್ತು ಸಿರಿಧಾನ್ಯಗಳ ಮೇಳವನ್ನು ಆಯೋಜನೆ ಮಾಡಲಾಗಿದೆ. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ 8 ವರ್ಷ ತೀವ್ರವಾದ ಬರಗಾಲ ಕಾಡಿದೆ. ಹಾಗಾಗಿ, ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯುವುದು, ಸಂಸ್ಕರಣೆ, ಮಾರುಕಟ್ಟೆ ಸೇರಿದಂತೆ ಮುಂತಾದವುಗಳ ಬಗ್ಗೆ ರೈತರಿಗೆ ಪ್ರೋತ್ಸಾಹ ನೀಡುವುದು ಒಂದು ಉದ್ದೇಶವಾಗಿದೆ ಎಂದರು.

ಜಾಥಾದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಹೆಗಡೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪ, ಸಧಿಹಾಧಿಯಕ ಉಪನಿರ್ದೇಶಕಿ ಅನುರೂಪ, ಜಿಲ್ಲಾ ಮಟ್ಟದ ಅಧಿಧಿಕಾರಿಗಳು, ಶಾಲಾ ಮಕ್ಕಳು, ವಿಧಿವಿಧ ಇಲಾಖೆಗಳ ಸಿಬ್ಬಂದಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ